ಬೆಳಗಾವಿ:ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ತಹಶಿಲ್ದಾರ ಪ್ರಕಾಶ ಗಾಯಕವಾಡ ಅವರ ಗಣೇಶಪುರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದಾರೆ.
ಪ್ರಕಾಶ ಗಾಯಕವಾಡ ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ಮೇಲೆ ದಾಳಿ ಅಧಿಕಾರಿಗಳ ದಾಳಿ ಮಾಡಿದ್ದು ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಭಯ ಬೀತರಾರದರು. ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ದಾಳಿಯಲ್ಲಿ ಭಾಗಿಯಾಗಿದ್ದಾರೆ.