Thursday, June 19, 2025
Google search engine
Homeರಾಜ್ಯಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು!
spot_img

ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು!

ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿದ್ದನ್ನು ಕಂಡ ಸ್ಥಳೀಯರು ಮೀನುಗಾರರು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಸಮುದ್ರಪಾಲಾಗಿದ್ದು ಬೀದರ್‌ ಮೂಲದ ಪರಮೇಶ್ವರ್‌ ಎಂಬಾತನನ್ನು ರಕ್ಷಿಸಿದ್ದಾರೆ.

ಮಂಗಳೂರು:  ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಗೆ ಪ್ರವಾಸಕ್ಕೆ ಬಂದಿದ್ದ ಮೂವರು ಪ್ರವಾಸಿಗರು ಸಮುದ್ರಪಾಲಾಗಿದ್ದಾರೆ. ಮೃತರು ಬೆಂಗಳೂರಿನ‌ ಸತ್ಯವೇಲು, ಚಿತ್ರದುರ್ಗದ ಮಂಜುನಾಥ್ ಮತ್ತು ಶಿವಮೊಗ್ಗದ ಶಿವಕುಮಾರ್ ಎಂದು ತಿಳಿದುಬಂದಿದೆ.

ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿದ್ದನ್ನು ಕಂಡು ಸ್ಥಳೀಯರು ಮೀನುಗಾರರು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಸಮುದ್ರಪಾಲಾಗಿದ್ದು ಬೀದರ್‌ ಮೂಲದ ಪರಮೇಶ್ವರ್‌ ಎಂಬಾತನನ್ನು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶಿವಕುಮಾರ್ ಮತ್ತು ಸತ್ಯವೇಲು ಎಂಬವರ ಮೃತದೇಹ ಸಿಕ್ಕಿದ್ದು ಮಂಜುನಾಥ್ ಮೃತದೇಹಕ್ಕೆ ಹುಡುಕಾಟ ನಡೆಯುತ್ತಿದೆ. ಇವರೆಲ್ಲರೂ ಬೆಂಗಳೂರಿನ ಎಎಂಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

RELATED ARTICLES
- Advertisment -spot_img

Most Popular

error: Content is protected !!