Thursday, June 19, 2025
Google search engine
Homeಕ್ರೈಂಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆ ಮೇಲೆ ಅನುಮಾನದಲ್ಲಿ ಮೂವರ ಭಯಾನಕ ಹತ್ಯೆ!
spot_img

ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆ ಮೇಲೆ ಅನುಮಾನದಲ್ಲಿ ಮೂವರ ಭಯಾನಕ ಹತ್ಯೆ!

ಬೆಂಗಳೂರು: ನಗರದ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜುವನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಒಂದೊಂದೇ ಭಯಾನಕ ಅಂಶಗಳು ಹೊರಬರುತ್ತಿವೆ. ಇದರೊಂದಿಗೆ, ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಕೂಡ ದೊರೆತಂತಾಗಿದೆ. ಅಸಲಿಗೆ ಗಂಗರಾಜು ಕೊಲೆ ಮಾಡಿದ್ದು ಎರಡನೇ ಪತ್ನಿಯನ್ನಲ್ಲ, ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯನ್ನು ಹಾಗೂ ಆಕೆಯ ಮಗಳನ್ನು ಎಂಬುದು ಗೊತ್ತಾಗಿದೆ.

ಮೊದಲ ಪತ್ನಿ ಹಾಗೂ ಮೊದಲ ಪತಿಯಿಂದ ವಿಚ್ಛೇದನ ಪಡೆಯದೆ ಭಾಗ್ಯಮ್ಮ ಮತ್ತು ಗಂಗರಾಜು ಲಿವಿಂಗ್ ಇನ್ ರಿಲೇಷನಲ್ಲಿದ್ದರು. ಭಾಗ್ಯಮ್ಮಗೆ ಮಗಳಿದ್ದ ವಿಚಾರ ತಿಳಿದಿದ್ದರೂ ಕೂಡಾ ಒಟ್ಟಿಗೆ ಜೀವನ ಮಾಡಲು ಆರೋಪಿ ಒಪ್ಪಿದ್ದ. ಆದರೆ, ಇತ್ತೀಚೆಗೆ ಭಾಗ್ಯಮ್ಮ ಸೇರಿ ಹೆಣ್ಣುಮಕ್ಕಳ ಮೇಲೂ ಸಾಕಷ್ಟು ಅನುಮಾನ ಪಡುತ್ತಿದ್ದ. ಪತ್ನಿ ಜೊತೆ ಮಗಳಿಗೂ ಅಕ್ರಮ ಸಂಬಂಧವಿದೆ ಎಂದು ಮಲತಂದೆಯೇ ಅನುಮಾನ ಪಟ್ಟಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ರೈತರ ಸಂತೆಯಿಂದ ಮಚ್ಚು ಖರೀದಿಸಿ ತಂದು ಕೊಲೆ

ಇತ್ತೀಚೆಗೆ ಮನೆಗೆ ಬಂದಿದ್ದ ಭಾಗ್ಯಮ್ಮ ಅಕ್ಕನ ಮಗಳು ಹೇಮಾವತಿ ನಡತೆ ಮೇಲೂ ಆರೋಪಿಗೆ ಅನುಮಾನ ಶುರುವಾಗಿತ್ತು. ಇದೇ ಕಾರಣಕ್ಕೆ ಗಲಾಟೆ ಮಾಡಿ ಕೊಲೆಗೆ ಸಂಚು ರೂಪಿಸಿದ್ದ. ಗಲಾಟೆ ಬಳಿಕ‌ ಹೆಸರಘಟ್ಟಕ್ಕೆ ಹೋಗಿದ್ದ ಆರೋಪಿ ರೈತರ ಸಂತೆಯಲ್ಲಿ ಮಚ್ಚು ಖರೀದಿ‌ ಮಾಡಿದ್ದ. ರೈತರು ಬಳಸುವ ಹರಿತವಾದ ಮಚ್ಚನ್ನು 500 ರೂಪಾಯಿ ಕೊಟ್ಟು ನೇರವಾಗಿ ಮನೆಗೆ ತಂದಿದ್ದ. ಬಳಿಕ ಮೂವರನ್ನು ಕೊಲೆ ಮಾಡಿ ಶರಣಾಗತಿಗೆ ಪ್ಲಾನ್ ಕೂಡಾ ಮಾಡಿಕೊಂಡಿದ್ದ.

ಪತ್ನಿ ಮನೆಯಲ್ಲಿ ಇಲ್ಲದನ್ನು ಮೊದಲೇ ತಿಳಿದಿದ್ದ ಆರೋಪಿ ಒಬ್ಬೊಬ್ಬರನ್ನೇ ಕೊಲೆ ಮಾಡಲು ಸಂಚು ಹೂಡಿದ್ದನಂತೆ. ಸಂತೆಯಿಂದ ಮನೆಗೆ ಬರುತ್ತುದ್ದಂತೆಯೇ ಮತ್ತೆ ಗಲಾಟೆ ತೆಗೆದು ಮೊದಲು ಮಲ ಮಗಳಾದ ನವ್ಯಾಳ ಕತ್ತಿಗೆ ಮಚ್ಚು ಬೀಸಿದ್ದಾನೆ. ಬಳಿಕ ಅಡ್ಡ ಬಂದಿದ್ದ ಸಂಬಂಧಿ ಹೇಮಾವತಿಯ ಮೇಲೂ ಮಚ್ಚಿನಿಂದ ಹಲ್ಲೆ ಮಾಡಿ ಇಬ್ಬರ ರುಂಡ ಮುಂಡ ಬೇರ್ಪಡಿಸಿ ಬಿಸಾಡಿದ್ದಾನೆ.

ಇಷ್ಟಲ್ಲದೆ ಮನೆಯಲ್ಲೇ ಇಬ್ಬರನ್ನ ಕೊಂದು ಮನೆಯಲ್ಲಿ ಪತ್ನಿಗಾಗಿ ಬಾಗಿಲ ಹಿಂದೆ ಆರೋಪಿ ಗಂಗರಾಜು ಹೊಂಚು ಹಾಕಿ ಕುಳಿತಿದ್ದಾನೆ. ಅಷ್ಟರಲ್ಲಿ ಪತ್ನಿ ಮನೆಗೆ ಬಂದಿದ್ದು, ರಕ್ತದ ಮದ ಮಡುವಿನಲ್ಲಿದ್ದ ಮಗಳ ನೋಡಿ ಕಿರುಚಾಡಿದ್ದಾಳೆ. ಅಷ್ಟರಲ್ಲಿ ಪತ್ನಿಯ ಮೇಲೂ ಸಿನಿಮೀಯ ಶೈಲಿಯಲ್ಲಿ ಅಟ್ಯಾಕ್ ಮಾಡಿ ಹತ್ಯೆ ಮಾಡಿದ್ದಾನೆ.

RELATED ARTICLES
- Advertisment -spot_img

Most Popular

error: Content is protected !!