Thursday, June 19, 2025
Google search engine
Homeಕ್ರೈಂಕ್ಷುಲ್ಲಕ ವಿಚಾರಕ್ಕೆ ಜಗಳ : ನಡುರಸ್ತೆಯಲ್ಲೆ ಹೊಡೆದು ಕೊಲೆ ಮಾಡಿದ ದುಷ್ಕರ್ಮಿಗಳು !
spot_img

ಕ್ಷುಲ್ಲಕ ವಿಚಾರಕ್ಕೆ ಜಗಳ : ನಡುರಸ್ತೆಯಲ್ಲೆ ಹೊಡೆದು ಕೊಲೆ ಮಾಡಿದ ದುಷ್ಕರ್ಮಿಗಳು !

ಬೆಳಗಾವಿ : ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು. ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು 45 ವರ್ಷದ ಲಕ್ಷ್ಮಣ ಮರನೂರು ಎಂದು ಗುರುತಿಸಲಾಗಿದೆ.

ನಿನ್ನೆ(ಜ.12)ಮಧ್ಯಹ್ನಾ ಬೆಳಗಾವಿ ಮೂಡಲಗಿಯ ಬಾರಿಗೆ ಮಧ್ಯಪಾನ ಮಾಡಲು ಲಕ್ಷ್ಮಣ ಬಂದಿದ್ದನು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಂಗಪ್ಪ ಪಾಟೀಲ್, ಈರಪ್ಪ ತುಂಗಳ ನಡುವೆ ಜಗಳ ಆರಂಭವಾಗಿದೆ.

ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೆ ಹೋಗಿದ್ದು. ಮೂವರ ನಡುವೆ ಪರಸ್ಪರ ಜಗಳ ಆರಂಭವಾಗಿದೆ. ಈ ವೇಳೆ ರಂಗಪ್ಪ ಪಾಟೀಲ್, ಈರಪ್ಪ ತುಂಗಳ ಅವರು ಲಕ್ಷ್ಮಣ್ ಮೇಲೆ ಹಲ್ಲೆ ನಡೆಸಿದ್ದು ಎಣ್ಣೆ ಗುಂಗಲ್ಲಿದ್ದ ಲಕ್ಷ್ಮಣ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಈ ವೇಳೆ ರಂಗಪ್ಪ ಪಾಟೀಲ್, ಈರಪ್ಪ ತುಂಗಳ ಶವವನ್ನು ಬಾರ್ ನಿಂದ ಹೊರತಂದು ಬಿಸಾಡಿದ್ದು. ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದಾರೆ. ಈ ಎಲ್ಲಾ ಕೃತ್ಯದ ವಿಡಿಯೋಗಳು ಸ್ಥಳೀಯರ ಕ್ಯಾಮರಗಳಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದ್ದು. ಇಬ್ಬರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಘಟನೆ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -spot_img

Most Popular

error: Content is protected !!