Tuesday, April 29, 2025
Google search engine
Homeಅಂಕಣಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ , ಭವನಕ್ಕೆ ರಮೇಶ್ ಜಾರಕಿಹೊಳಿಯ...
spot_img

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ , ಭವನಕ್ಕೆ ರಮೇಶ್ ಜಾರಕಿಹೊಳಿಯ ಕೊಡಗೆ ಇದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಗಾಂಧಿ ಭಾರತ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ‌ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಗುರುವಾರ ಬೆಳಗಾವಿಯಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಬಾರಿ ನಿರ್ಣಯ ಮಾಡಿದ ಹಾಗೆ ಯಥಾ ಪ್ರಕಾರ ಕಾರ್ಯಕ್ರಮ ನಡೆಯಲಿದೆ. ಜ.21ಕ್ಕೆ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಲೋಕಾರ್ಪಣೆ ಮಾಡಲಾಗುವುದು. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದರು. ಸರಕಾರಿ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲ‌ ಶಾಸಕ, ಸಚಿವರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಸಮಾವೇಶಕ್ಕೆ ಮಾತ್ರ ಕಾಂಗ್ರೆಸ್ ಕಾರ್ಯಕರ್ತರು ಮಾತ್ರ ಭಾಗಿಯಾಗುತ್ತಾರೆ ಎಂದರು.

ಕಾಂಗ್ರೆಸ್ ಅಧ್ಯಕ್ಷರ‌ ಬದಲಾವಣೆ ಮಾಡಿ ಎಂದು ನಾನು ಹೇಳಿಲ್ಲ. ಈ ಕುರಿತು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದೇನೆ. ಅಧ್ಯಕ್ಷರ ಬದಲಾವಣೆ ನಾವು ಯಾರೂ ಅಧಿಕೃತವಲ್ಲ. ಬದಲಾವಣೆ ಮಾಡುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಸಿಎಲ್ ಪಿ ಸಭೆಯಲ್ಲಿ ಮಾತನಾಡಿದ್ದಕ್ಕೆ ರಮೇಶ್ ಅಭಿನಂದನೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ ಕಾಂಗ್ರೆಸ್ ಕಚೇರಿಗೆ ರಮೇಶ್ ಜಾರಕಿಹೊಳಿ ಅವರ ಕಾಂಟ್ರಿಬ್ಯುಷನ್ ಸಹ ಇದೆ. ನಾವು ಎಷ್ಟು ಸೌಮ್ಯ ಇರ್ತಿವಿ ಅಷ್ಟು ಒಳ್ಳೆದಾಗುತ್ತೆ ಉಗ್ರ ರೂಪ ತಾಳುವುದು ಒಳ್ಳೆದಲ್ಲ ಎಂದರು. ಸುರ್ಜೇವಾಲ ಅವರು ಟೈಂ ಕೊಟ್ಟಿದ್ದರು, ಎಲ್ಲರೂ ಸಹ ಸುರ್ಜೇವಾಲ ಅವರೊಂದಿಗೆ ಮಾತನಾಡಿದ್ದಾರೆ.

ಸುರ್ಜೇವಾಲ ಬೆಳಗಾವಿಗೆ ಬರುತ್ತಾರೆ. ಕಾಂಗ್ರೆಸ್ ಸಮಾವೇಶದ ಕುರಿತು ಚಿಕ್ಕೋಡಿ, ಬೆಳಗಾವಿ ಕ್ಷೇತ್ರದ ಸಭೆ ಮಾಡುತ್ತಾರೆ. ಕಾಂಗ್ರೆಸ್ ಕಟ್ಟಡ ವಿಚಾರ ಎಲ್ಲರಿಗೂ ಶ್ರೇಯಸ್ಸು ಸೇರಬೇಕು. ಅದರ ಕ್ರೆಡಿಟ್ ಎಲ್ಲರಿಗೂ ಸೇರಬೇಕು ಎಂದರು. ಆಗಿನ ಅಧ್ಯಕ್ಷರು ಕಟ್ಟಡದ ಹಣ ತೆಗೆದುಕೊಂಡು ಚೈನಿ ಮಾಡಿದರು ಎಂಬ ರಮೇಶ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು ಅದನ್ನು ಅವರನ್ನೇ ಕೇಳಿ ಎಂದರು.

RELATED ARTICLES
- Advertisment -spot_img

Most Popular

error: Content is protected !!