ಬೆಳಗಾವಿ:ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲು
ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದ ಘಟನೆ
ಗಣೇಶ ಹೀರಾಮಣಿ ಸುತಾರ್ (15) ಮೃತ ಬಾಲಕ
ಮಂಗಳವಾರ ಶಾಲೆಗೆ ರಜೆಯಿದ್ದ ಕಾರಣ ಈಜಲು ಹೋಗಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಮನೆಗೆ ಬಾರದ ಹಿನ್ನೆಲೆ ಕುಟುಂಬದವರು ಎಲ್ಲ ಕಡೆ ಹುಡುಕಾಟ
ಕೆರೆಯ ಬಳಿ ಆತನ ಬಟ್ಟೆ ಕಂಡು ಬಂದಾಗ ಮುಳುಗಿ ಸಾವನ್ನಪ್ಪಿರುವುದು ಬೆಳಕಿಗೆ
ಕೂಡಲೇ ವಡಗಾಂವ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು
ಬಾಲಕನ ಶವವನ್ನು ಕೆರೆಯಿಂದ ಹೊರತೆಗೆದ ಅಗ್ನಿಶಾಮಕ ಸಿಬ್ಬಂದಿ
ಕುಟುಂಬಸ್ಥರ ಮುಗಿಲು ಮುಟ್ಟಿದ ಆಕ್ರಂದನ
ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.