Wednesday, June 18, 2025
Google search engine
Homeಜಿಲ್ಲಾರಾಜ್ಯಾಧ್ಯಕ್ಷ ಚುನಾವಣೆ: ಇದೊಂದು ಯುದ್ಧ, ಹಿಂದೆ ಸರಿಯೋ ಮಾತೇ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್
spot_img

ರಾಜ್ಯಾಧ್ಯಕ್ಷ ಚುನಾವಣೆ: ಇದೊಂದು ಯುದ್ಧ, ಹಿಂದೆ ಸರಿಯೋ ಮಾತೇ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಇದೊಂದು ಯುದ್ಧ, ನಮ್ಮದು ಮಾಡು ಇಲ್ಲವೆ ಮಡಿ ಹೋರಾಟ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಸದಾಶಿವನಗರದ ಕುಮಾರ ಬಂಗಾರಪ್ಪ ನಿವಾಸದಲ್ಲಿ ಶುಕ್ರವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಸುದೀರ್ಘ ಪತ್ರವನ್ನು ಬರೆಯಲಾಗಿದೆ. ಪಕ್ಷದ ಚೌಕಟ್ಟಿನಲ್ಲಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷರ ನೇಮಕಾತಿ ಪ್ರಕ್ರಿಯೆ ವ್ಯವಸ್ಥಿತ ರೀತಿಯಲ್ಲಿ ಮಾಡಿಲ್ಲ. ರಾಜ್ಯಾಧ್ಯಕ್ಷ ಆಗುವ ಉದ್ದೇಶದಿಂದ ಮಾಡಲಾಗಿದೆ. ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಏಕಪಕ್ಷೀಯವಾಗಿ ಬೇಕಾಬಿಟ್ಟಿ ಮಾಡಲಾಗಿದೆ ಎಂದು ಆರೋಪಿಸಿದರು. ಜಿಲ್ಲಾಧ್ಯಕ್ಷರ ನೇಮಕಾತಿಯಲ್ಲಿ ಸಾಕಷ್ಟು ಗೊಂದಲ ಆಗಿದೆ ಜಿಲ್ಲಾಧ್ಯಕ್ಷರ ಘೋಷಣೆ ಬಳಿಕ ತಟಸ್ಥ ಗುಂಪು ಜೆಪಿ ನಡ್ಡಾ ಅವರಿಗೆ ಪತ್ರವನ್ನು ಬರೆದಿದ್ದಾರೆ‌. ಏಕಪಕ್ಷೀಯವಾಗಿ ಚುನಾವಣೆ ನಡೆಸಲಾಗಿದೆ ಎಂದು ದೂರು ನೀಡಿದ್ದಾರೆ ಎಂದು ವಿವರಿಸಿದರು.

ರಾಜ್ಯಾಧ್ಯಕ್ಷ ಚುನಾವಣೆ ಬಂದರೆ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಇನ್ನೆರೆಡು ದಿನ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಸಭೆ ನಡೆಸುತ್ತೇವೆ. ಜಿಲ್ಲಾಧ್ಯಕ್ಷರ ನೇಮಕಾತಿ ಪಾರದರ್ಶಕವಾಗಿಲ್ಲ. ಅಪಮಾನ, ಅವಮಾನ ಮಾಡುವ ರೀತಿಯಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನನ್ನ ಹೋರಾಟಕ್ಕೆ ನಾವು ಬದ್ಧ, ಯಾವುದೇ ಬದಲಾವಣೆ ಇಲ್ಲ. ದೆಹಲಿಯಲ್ಲಿ ಸಂಸತ್ ಅಧಿವೇಶನ ನಡೆಯುತ್ತಿದೆ. ಅಲ್ಲಿ ಎಲ್ಲರ ಜೊತೆಗೆ ಚರ್ಚೆ ಮಾಡಿ ಯಾರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುತ್ತೇವೆ.

23 ಜಿಲ್ಲಾಧ್ಯಕ್ಷರ ನೇಮಕಾತಿಗೆ ಒಪ್ಪಿಗೆ ಇಲ್ಲ. ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರಾತ್ರೋ ರಾತ್ರಿ ನಮಗೆ ಬೇಕಾದವರನ್ನು ಆಯ್ಕೆ ಮಾಡಲಾಗಿದೆ. ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನಾಯಕತ್ವ ಎಂದರೆ ಏನು? ರಾಜ್ಯಾಧ್ಯಕ್ಷ ಬಿಜೆಪಿ ಕರ್ನಾಟಕದ ನಾಯಕ ಆಗಬೇಕು. ಆದರೆ ವಿಜಯೇಂದ್ರ ಉದ್ಧಟತನದಿಂದ ವರ್ತಿಸುತ್ತಿದ್ದಾರೆ‌. ಇದು ಆತಂಕಕಾರಿ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು, ಒಳ್ಳೆಯ ಆಡಳಿತ ನೀಡಬೇಕು ಎಂಬ ನಿಟ್ಟಿನಲ್ಲಿ ನಮ್ಮ ಹೋರಾಟ ಎಂದರು.

ಜಿಲ್ಲಾಧ್ಯಕ್ಷರ ನೇಮಕಾತಿಯ ಸಂದರ್ಭದಲ್ಲಿ ಕೇಂದ್ರವನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರಾ ಎಂಬುದು ಗೊತ್ತಿಲ್ಲ. ಹೈಕಮಾಂಡ್ ನಮ್ಮನ್ನು ಕೇಳಲೇ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಇಲ್ಲ ಎಂಬ ವಾತಾವರಣ ಇತ್ತು, ಆದರೆ ಈಗಿಲ್ಲ ಎಂದರು. ಎಸ್ ಆರ್ ವಿಶ್ವನಾಥ ನಿಷ್ಠೆ ಬಿಎಸ್ ಯಡಿಯೂರಪ್ಪಗೆ, ವಿಜಯೇಂದ್ರಗೆ ಅಲ್ಲ. ನಮ್ಮ ಶಕ್ತಿ ದೊಡ್ಡದಾಗಿದೆ. ದೊಡ್ಡ ಗುಂಪು ತಯಾರಾಗಿದೆ. ಎಲ್ಲ ಒಂದೇ ಮನಸ್ಥಿತಿ ಹೊಂದಿದ್ದೇವೆ ಎಂದರು.

ನಮ್ಮದು ಡು ಆರ್ ಡೈ,, ಇದೊಂದು ಯುದ್ಧ, ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದರು. ರಾಜ್ಯಾಧ್ಯಕ್ಷ ಅಷ್ಟು ಬೇಗ ಆಯ್ಕೆ ಮಾಡುವುದಿಲ್ಲ. ಹಿರಿಯ ನಾಯಕರ ಅಭಿಪ್ರಾಯ ಪಡೆಯಬೇಕು. ಇನ್ನೂ ಸಾಕಷ್ಟು ಪ್ರಕ್ರಿಯೆ ಇದೆ. ಹೈಕಮಾಂಡ್ ಗೆ ಈಗ ಮನವರಿಕೆ ಆಗ್ತಿದೆ ಎಂದು ಹೇಳಿದರು.

RELATED ARTICLES
- Advertisment -spot_img

Most Popular

error: Content is protected !!