Thursday, June 19, 2025
Google search engine
Homeಜಿಲ್ಲಾಮಾರ್ಚವರೆಗೆ ನರೇಗಾ ಗುರಿ ತಲುಪದಿದ್ದರೆ ಪಿಡಿಒ, ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ : ರವಿ ಎನ್...
spot_img

ಮಾರ್ಚವರೆಗೆ ನರೇಗಾ ಗುರಿ ತಲುಪದಿದ್ದರೆ ಪಿಡಿಒ, ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ : ರವಿ ಎನ್ ಬಂಗಾರೆಪ್ಪನವರ

ಬೆಳಗಾವಿ : ಮಾರ್ಚ ಅಂತ್ಯದೊಳಗೆ ತಮ್ಮ ಗ್ರಾಮ ಪಂಚಾಯಿತಿವಾರು ಮಾನವ ದಿನಗಳ ಸೃಜನೆಯಾಗದಿದ್ದರೆ ಪಿಡಿಒ ಮತ್ತು ನರೇಗಾ ಸಿಬ್ಬಂದಿಗಳಿಗೆ ನಿರ್ದಾಕ್ಷಣ್ಯ ಕ್ರಮ ತೆಗೆದುಕೊಳ್ಳಲಾಗುವುದುದೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಎನ್ ಬಂಗಾರೆಪ್ಪನವರ ಎಚ್ಚರಿಕೆ ನೀಡಿದರು.

ಸ್ಥಳೀಯ ತಾಲ್ಲೂಕ ಪಂಚಾಯತ ಸಭಾ ಭವನದಲ್ಲಿ ಬುಧವಾರ (ಫೆ.12) ರಂದು ಜರುಗಿದ ವಿವಿಧ ಯೋಜನೆಗಳ ಪ್ರಗತಿ ಪರಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ತಮ್ಮ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯಲ್ಲಿ ಬರುವ ಕೂಲಿ ಕಾರ್ಮಿಕರಿಗೆ ಅನುಗುಣವಾಗಿ ಕೆಲಸಗಳನ್ನು ನೀಡಬೇಕು. ಕೂಲಿ ಕಾರ್ಮಿಕರು ಹೆಚ್ಚಿಗೆ ಇರುವ ಪಂಚಾಯಿತಿ ಅವರು ಕಾಮಗಾರಿಗಳ ಪಟ್ಟಿ ಮಾಡಿ ಕೂಲಿಕಾರ್ಮಿಕರಿಗೆ ನಿರಂತರ ಕೆಲಸ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಆಧ್ಯತಾ ಕಾಮಗಾರಿಗಳಾದ ಶಾಲಾ ಶೌಚಾಲಯ, ಆಟದ ಮೈದಾನ, ಅಡಿಗೆ ಕೋಣೆ, ಗ್ರಾಮ ಪಂಚಯತಿ ಕಟ್ಟಡ ಸೇರಿದಂತೆ ಇತರ ಕಾಮಗಾರಿಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಕೂಸಿನ ಮನೆಗಳನ್ನು ಅಚ್ಚು ಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ನರೇಗಾ ಯೋಜನೆಯ ಜೊತೆಗೆ ಎಸ್.ಬಿ.ಎಮ್. ಎನ್ ಆರ್ ಎಲ್ ಎಮ್. ಸೇರಿದಂತೆ ತಮ್ಮ ಗ್ರಾಮ ಪಂಚಾಯಿಗೆ ನೀಡಿದ ಗುರಿಯನ್ನು ತಕ್ಕಂತೆ ಕೆಲಸ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಮೇಶ ಹೆಡಗೆ, ಸಹಾಯಕ ನಿರ್ದೇಶಕರಾದ (ಗ್ರಾ.ಉ) ಮಾನ್ಯ ಬಿ.ಡಿ ಕಡೇಮನಿ, ತಾಪಂ ತಾಂತ್ರಿಕ ಸಂಯೋಜಕ ಮುರುಗೇಶ ಯಕ್ಕಂಚಿ, ತಾ.ಐಇಸಿ ಸಂಯೋಜಕ ರಮೇಶ ಮಾದರ ಸೇರಿಂದತೆ ತಾಲ್ಲೂಕ ಪಂಚಾಯತ ಸಿಬ್ಬಂದಿಗಳು ಅಭಿವೃದ್ಧಿ ಅಧಿಕಾರಿಗಳು ತಾಂತ್ರಿಕ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

RELATED ARTICLES
- Advertisment -spot_img

Most Popular

error: Content is protected !!