ಬೆಳಗಾವಿ : ಅಪಾರ್ಟ್ಮೆಂಟ್ ಗೆ ನುಗ್ಗಿ ಮಹಿಳೆ ಮಂಗಳಸೂತ್ರ ಕಿತ್ತುಕೊಂಡು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಲಕ್ಷ್ಮೀ ನಗರದಲ್ಲಿ ಘಟನೆಮಂಗಳವಾರ ನಡೆದಿದೆ.
ಬೆಳಗಾವಿಯ ಲಕ್ಷ್ಮೀ ನಗರದ ನಿವಾಸಿ ಅಂಜನಾ ಅಜೀತ ದಡ್ಡೀಕರ್(49) ಕೊಲೆ ನಡೆದಿದೆ .
ಕತ್ತುಹಿಸುಕಿ ಕೊಲೆ ಮಾಡಿ ನಾಪತ್ತೆ ಆಗಿರೋ ಶಂಕೆ ವ್ಯಕ್ತಪಡಿಸಿದ ಪೊಲೀಸರು ಅಪಾರ್ಟ್ಮೆಂಟ್ ನಲ್ಲಿ ಗಂಡ-ಹೆಂಡತಿ ಮಾತ್ರ ವಾಸಿಸುತ್ತಿದು, ಆಟೋ ರೀಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದ ಅಜೀತ್ ದಡ್ಡೀಕರ್ ಪತಿ ಅಜೀತ್ ಸಂಜೆ ಮನೆಗೆ ವಾಪಸ್ ಬಂದಾಗ ಕೊಲೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾರನ್ನ ಬೆಳಗಾವಿ ಆಸ್ಪತ್ರೆಗೆ ದಾಖಲಿಸಿ ಕೊರಳಲ್ಲಿದ್ದ ಮಂಗಳಸೂತ್ರ, ಕಿವಿಯೊಲೆ, ಕೈಯಲ್ಲಿ ಬಂಗಾರ ಉಂಗುರು ಕದ್ದು ಕೊಲೆ ಮಾಡಿರುವ ಶಂಕೆ ಮಾಡಿದ್ದಾರೆ ಎಂದು ಕುಟುಂಬಸ್ಥರ ಆರೋಪಿಸಿದರು.
ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳಿಂದ ಪರಿಶೀಲನೆ ,ಸ್ಥಳಕ್ಕೆ ಕ್ರೈಮ್ ಡಿಸಿಪಿ ನಿರಂಜನರಾಜೆ ಅರಸ್,ಕ್ಯಾಂಪ್ ಪೊಲೀಸ ಠಾಣಾ ಸಿಪಿಐ ಆಲ್ತಾಫ್ ಮುಲ್ಲಾ ಭೇಟಿ, ಪರಿಶೀಲನೆ ನಡೆಸಿದರು.
ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.