ಬೆಳಗಾವಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೊಣ್ಣೂರಿನಲ್ಲಿ ನಡೆದಿದೆ.
ಮನೋಜ್ ನಾಯಕ (15) ಮೃತ ಬಾಲಕ ಹಾಗೂ ಇಬ್ಬರು ಗೆಳೆಯರು ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ಸಂದರ್ಭದಲ್ಲಿ ನದಿಗೆ ಇಳಿದಿದ್ದರು. ನೀರಿನ ಸೆಳವಿಗೆ ಸಿಲುಕಿದ್ದ ಮೂವರಲ್ಲಿ ಮನೋಜ್ ನಾಯಕ ಈಜು ಬಾರದೆ ಸಾವನ್ನಪ್ಪಿದ್ದಾನೆ. ಇನ್ನಿಬ್ಬರು ಬಾಲಕರು ಪರಾಗಿದ್ದಾರೆ. ಪೊಲೀಸರ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತ ದೇಹ ಹೊರಗೆ ತೆಗೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಮುಗಿಲ ಮುಟ್ಟಿತು.ಈ ಬಗ್ಗೆ ಗೋಕಾಕ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.