ಬೆಳಗಾವಿ : ಸೋಮವಾರ ಕುರಾನ್ ಸುಟ್ಟ ಘಟನೆ ನಡೆದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸಂತಿಬಸ್ತವಾಡ ಗ್ರಾಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿ ನೀಡಿ, ಶಾಂತಿ ಸಭೆ ನಡೆಸಿದರು.
ಬೆಂಗಳೂರಿನಿಂದ ಆಗಮಿಸಿದ ಸಚಿವೆ, ಬೆಳಗಾವಿ ವಿಮಾನ ನಿಲ್ದಾಣದಿಂದ ನೇರವಾಗಿ ಗ್ರಾಮಕ್ಕೆ ತೆರಳಿ, ಘಟನೆಯ ಮಾಹಿತಿ ಪಡೆದು ಶಾಂತಿ ಸಭೆ ನಡೆಸಿದರು.
ಶಾಂತಿಯಿಂದ ಇರುವಂತೆ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು.