Wednesday, June 18, 2025
Google search engine
Homeರಾಜ್ಯಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ: ಕೋಡಿಮಠದ ಶ್ರೀಗಳು
spot_img

ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ: ಕೋಡಿಮಠದ ಶ್ರೀಗಳು

ಬೆಳಗಾವಿ: ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ ಎಂದು ಕೋಡಿಮಠದ ಶ್ರೀಗಳು ಬೆಳಗಾವಿಯಲ್ಲಿ ಭವಿಷ್ಯ ನುಡಿದ್ದಾರೆ.

ಇಂದು ಬೆಳಗಾವಿಯಲ್ಲಿ ಕೋಡಿಮಠದ ಶ್ರೀಗಳು ಮತ್ತೇ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಕೋವಿಡ್ ಕುರಿತು ಮತ್ತೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ.

ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘ ಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸನ ಮನೆಗೆ ಕಾರ್ಮೋಡ ಕವಿದಿತ್ತು ಎಂದು ಮಾರ್ಮಿಕವಾಗಿ ನುಡಿದ್ದಾರೆ

RELATED ARTICLES
- Advertisment -spot_img

Most Popular

error: Content is protected !!