Thursday, June 19, 2025
Google search engine
Homeರಾಜ್ಯಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ...
spot_img

ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

ಬೆಳಗಾವಿ : ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೆಳಗಾವಿ ಜಿಲ್ಲಾ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

ಬೆಳಗಾವಿಯ ಕಾಳಿ ಅಂಬ್ರಾಯಿಯಲ್ಲಿರುವ ಸಭಾಗೃಹದಲ್ಲಿ ಬೆಳಗಾವಿ ಜಿಲ್ಲಾ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಚಿಕ್ಕುಂಬಿಯ ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಬಡಿಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ಡಾ. ಗುರುನಾಥ ಬಡಿಗೇರ ಉಪಸ್ಥಿತರಿದ್ಧರು. ಉಪಸ್ಥಿತ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಸನ್ಮಾನಿಸಿದರು.

ನಂತರದಲ್ಲಿ ಡಾ. ಎ.ಎಂ. ಸುಧಾಕರ, ಪ್ರಭಾಕರ ನೀಲಕಂಠ, ಗಜಾನನ ಸಾಬಣ್ಣವರ, ರಾಜೀವ್ ಪಂಡಿತ್, ಡಾ. ನಿರ್ಮಲ ಬಟ್ಟಲ್. ಮನೋಜ್ ಸುತಾರ ಸೇರಿದಂತೆ ಇನ್ನುಳಿದವರು ಮಾರ್ಗದರ್ಶನ ನೀಡಿದರು.

ಈ ವೇಳೆ ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ಡಾ. ಗುರುನಾಥ ಬಡಿಗೇರ ಅವರು ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಅರಿತು ಪರಿಣಿತಿ ಹೊಂದಬೇಕೆಂದರೇ, ಮೊದಲು ಆ ವಿಷಯಗಳ ಆಳ ಅಧ್ಯಯನ ಮಾಡಬೇಕು. ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಅವಕಾಶಗಳಿವೆ. ಯಾವುದನ್ನೇ ಕಲಿತರು ಅದನ್ನು ಸರಿಯಾಗಿ ತಿಳಿದುಕೊಂಡು ಕಲಿತೇ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು.

ಎಂ.ಕೆ. ಬಡಿಗೇರ ಅವರು ವಿದ್ಯಾರ್ಥಿಗಳು ವಿಷಯಗಳನ್ನು ಆಳವಾಗಿ ಅಭ್ಯಸಿಸಿ, ಪರಿಣಿತರಾಗಬೇಕು. ಏಕಾಗ್ರತೆಯಿಂದ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವ ಮತ್ತು ಪ್ರೋತ್ಸಾಹಿಸುವ ಕಾರ್ಯವನ್ನು ಪ್ರತಿವರ್ಷ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಸಿಕೊಂಡು ಸಾಧನೆಯನ್ನು ಮಾಡಬೇಕೆಂದು ಕರೆ ನೀಡಿದರು.

ಇನ್ನು ಅಧ್ಯಕ್ಷ ಪ್ರಭಾಕರ ಬಡಿಗೇರ ಅವರು ಪ್ರತಿವರ್ಷವು ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಮಕ್ಕಳಿಗೆ ಕೇವಲ ಪ್ರತಿಭಾ ಪುರಸ್ಕಾರಗಳನ್ನು ನೀಡಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾತ್ರ ಮಾಡದೇ, ಅವರು ತಮ್ಮ ಗುರಿಯನ್ನು ಮುಟ್ಟಲು ಸೂಕ್ತ ಮಾರ್ಗದರ್ಶನವನ್ನು ಮಾಡಲಾಗುತ್ತಿದೆ. ಹಲವರು ಗಣ್ಯರು ಈ ಕಾರ್ಯಕ್ಕೆ ತನುಮನಧನದಿಂದ ಸಹಾಯವನ್ನು ಮಾಡುತ್ತಿದ್ದು, ಯಶಸ್ವಿಯಾಗಿ 4ನೇ ವರ್ಷ ಈ ಕಾರ್ಯಕ್ರಮ ಮುಂದುವರೆದಿದೆ. ಹಿರಿಯ ಸಹಾಯದಿಂದ ಈಗ ಸುವರ್ಣ ಮಹೋತ್ಸವ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ರಾಜೀವ್ ಪಂಡಿತ, ಮಹಾಬಳೇಶ್ವರ ಬಡಿಗೇರ್, ಶ್ಯಾಮಸುಂದರ ಪತ್ತಾರ, ವೀರಣ್ಣ ದೇಶನೂರ, ದತ್ತಾತ್ರೈಯ ಅಂಬೇವಾಡಿಕರ, ಶ್ರೀಕಾಂತ ಬಡಿಗೇರ, ಗಂಗಪ್ಪ ಸೋನಾ, ಶಶಿಧರ ಸುತಾರ ಇನ್ನುಳಿದವರು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

RELATED ARTICLES
- Advertisment -spot_img

Most Popular

error: Content is protected !!