ಬೆಳಗಾವಿ; ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಹತ್ತಿರ ಎಸ್ ಎಸ್ ಟ್ರಾವೇಲ್ಸ್ ಬಸ್ ಹಾಗೂ ಟ್ರಕ್ ನಡುವೆ ತಪ್ಪಿದ ಭಾರಿ ಅನಾಹುತ.
ಬೆಂಗಳೂರಿನಿಂದ ಬೆಳಗಾವಿ ಕಡೆಗೆ ಪ್ರಯಾಣಿಕರನ್ನ ಕರೆದುಕ್ಕೊಂಡು ಬರುತ್ತಿದ್ದ ಬಸ್ ಟ್ರಕ್ ಗೆ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ಟ್ರಕ್ ಹಿಂಬದಿ ಹಾಗೂ ಬಸ್ಸಿನ ಮುಂಬಾಗ ಸಂಪೂರ್ಣ ಜಖಂ ಗೊಂಡಿದೆ.
ವೇಗದಲ್ಲಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾದ ಟ್ರಕ್,ಅಪಘಾತವಾದ ಪರಿಣಾಮ ಚಾಲಕನಿಗೆ ಗಂಭೀರ ಗಾಯ ಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿ ಬಸ್ ಚಾಲಕನ ರಕ್ಷಣೆ ಮಾಡಿದ ಪೊಲೀಸರು. ಕಿತ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.