ಬೆಳಗಾವಿ: ರಾಜು ಕಾಗೆ ಸರ್ಕಾರದ ವಿರುದ್ಧ ಅಸಮಾಧಾನ ವಿಚಾರಕ್ಕೆ ಕುರಿತು ಬೆಳಗಾವಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬು ತುಳುಕುತ್ತಿದೆ ಸರ್ಕಾರದಲ್ಲಿ ಯಾವುದೇ ಕೆಲಸ ಆಗ್ತಿಲ್ಲ. ಸರ್ಕಾರ ದೀವಾಳಿ ಆಗಿದೆ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಅಂತಾ ಆಡಳಿತ ಪಕ್ಷದವರು ಹೇಳ್ತಿದ್ದಾರೆ ಎಂದರು.
ಬೆಳಗಾವಿಯಲ್ಲಿ ಇಂದು ಮಾದ್ಯಮ ಜೋತೆ ಮಾತನಾಡಿದ ಅವರು ಮೂಗಿಗೆ ತುಪ್ಪು ಒರೆಸುವ ಕೆಲಸ ಸಿದ್ದರಾಮಯ್ಯ ಮಾಡ್ತಿದ್ದಾರೆ. ಟೆಂಡರ್ ಮಾಡೋದು ವರ್ಕ್ ಆರ್ಡರ್ ಕೊಡುವುದಿಲ್ಲ. ರಾಜು ಕಾಗೆ, ಬಿಆರ್ ಪಾಟೀಲ್ ಹೇಳಿಕೆ ಸರಿ ಇದೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಅಸಮಾಧಾನಿತ ಶಾಸಕರು ಬಿಜೆಪಿಗೆ ಬರ್ತಾರಾ ಎಂಬ ಮಾದ್ಯಮ ಪ್ರಶ್ನೆಗೆ ಉತ್ತರಿಸಿದ ಅವರು ರಾಜು ಕಾಗೆ ಸೇರಿದಂತೆ ಬಹಳಷ್ಟು ಜನ ಕಾಂಗ್ರೆಸ್ ನವರು ಬರಲು ರೆಡಿ ಇದಾರೆ.ಅಲ್ಲಿನ ಇನ್ ಫೈಟಿಂಗ್ ಯಾವಾಗ ಸ್ಪೋಟ ಆಗುತ್ತೆ ಗೊತ್ತಾಗುತ್ತಿಲ್ಲ ಸಿಎಂ ಬದಲಾವಣೆ ಆಗುತ್ತೆ ಗೊತ್ತಿಲ್ಲ ಸರ್ಕಾರ ಕೊಲ್ಯಾಪ್ಸ್ ಆಗುತ್ತೆ ನಾವು ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ. ಅವರೇ ಬರ್ತಾರೆ ಇದಕ್ಕೆ ಆಪರೇಷನ್ ಕಮಲ ಅಂತಾರೆ ಎಂದು ಶೆಟ್ಟರ್ ಹೇಳಿದರು.