ಬೆಳಗಾವಿ : ಕರ್ನಾಟಕ ಕಾಡುಗೊಲ್ಲ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಡಾ. ರಾಜೀವ ಕೂಲೇರ ಅಧಿಕಾರಿ ವಹಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಕೆ. ಅಶ್ವಥ ಅವರು ಆದೇಶ ಹೊರಡಿಸುತ್ತಾರೆ.
ಸದರಿಯವರಿಗೆ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಅಲೆಮಾರಿ ಹಾಗೂ ಅರೆ-ಅಲೆಮಾರಿ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗಳ ಹೆಚ್ಚುವರಿ ಪ್ರಭಾರವನ್ನು ವಹಿಸಲಾಗಿದೆ.
ಡಾ. ರಾಜೀವ ಕೂಲೇರ ಅವರು ಈ ಹಿಂದೆ ಬೆಳಗಾವಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ (ಆಡಳಿತ) ಉಪ ನಿರ್ದೇಶಕ ಕಾರ್ಯ ನಿರ್ವಹಿಸಿರುತ್ತಾರೆ.