Thursday, June 19, 2025
Google search engine
Homeಸುದ್ದಿಕಾರಂಜಿ ಶ್ರೀಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ವಿವಿಧ ಕಾರ್ಯಕ್ರಮಗಳು
spot_img

ಕಾರಂಜಿ ಶ್ರೀಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ವಿವಿಧ ಕಾರ್ಯಕ್ರಮಗಳು

ಬೆಳಗಾವಿ: ಇಲ್ಲಿನ ಶಿವಬಸವನಗರದ ಕಾರಂಜಿ ಶ್ರೀಮಠದ ಶಿವಾನುಭವ ಮಂಟಪದಲ್ಲಿ ಶುಕ್ರವಾರ  ಮಾ. ೮  ರಂದು ಸಂಜೆ ೬ ಗಂಟೆಗೆ ಮಹಾಶಿವರಾತ್ರಿ ನಿಮಿತ್ತ ೨೭೨ನೇ ಶಿವಾನುಭವ ಗೋಷ್ಠಿ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ.


ಶ್ರೀಮಠದ ಪರಮಪೂಜ್ಯ ಶ್ರೀ ಗುರುಸಿದ್ಧ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿರುವ ಸಮಾರಂಭದಲ್ಲಿ ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ.  ನೂತನ ಉತ್ತರಾಧಿಕಾರಿಗಳಾದ ಪೂಜ್ಯ ಶಿವಯೋಗಿ ದೇವರ ಸಮ್ಮುಖದಲ್ಲಿ  ಕಾರ್ಯಕ್ರಮ ಜರುಗಲಿದೆ.

ಉತ್ತರ ಸೇವಾ ಸಂಘದ ಪ್ರಾಂತ ಕಾರ‍್ಯವಾಹ ರಾಘವೇಂದ್ರ ಕಾಗವಾಡ ಅಧ್ಯಕ್ಷತೆ ವಹಿಸಲಿದ್ದಾರೆ. ‘ಪಂಚಾಕ್ಷರಿ ಮಂತ್ರ ಮಹಿಮೆ’ ವಿಷಯ ಕುರಿತು ನಾಡಿನ ಖ್ಯಾತ ವಿದ್ವಾಂಸರಾದ ಡಾ.ಬಸವರಾಜ ಜಗಜಂಪಿಯವರು ಉಪನ್ಯಾಸ ನೀಡಲಿದ್ದಾರೆ.  ಸಂಗೀತ ವಿದೂಷಿ ಶೋಭಾ ಮಲ್ಲಿಕಾರ್ಜುನ ಜಾಬಿನ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ, ಇದೇ ಸಂದರ್ಭದಲ್ಲಿ ಆರ್ಕಿಟೆಕ್ಚ, ಇಂಟೀರಿಯರ್ ಡಿಸೈನರ್  ಕರುಣಾ ಎಸ್. ಹಿರೇಮಠ ಅವರ ಸನ್ಮಾನ ಸಮಾರಂಭ ಜರುಗುವುದು ಎಂದು ಶ್ರೀಮಠವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!