ಬಾವನಸೌಂದತ್ತಿ(ಬೆಳಗಾವಿ ಜಿಲ್ಲೆ): ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಭಾನುವಾರ ರಾಯಬಾಗ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ರಾಯಬಾಗ ತಾಲ್ಲೂಕಿನ ನಿಡಗುಂದಿಯ ಕಲ್ಲಪ್ಪ ಬಸಪ್ಪ ಗಾಣಿಗೇರ(36), ಮನೋಜ ಕಲ್ಲಪ್ಪ ಗಾಣಿಗೇರ(11), ಮದನ ಕಲ್ಲಪ್ಪ ಗಾಣಿಗೇರ (9) ಮೃತಪಟ್ಟವರು.
ಮೂಲತಃ ಸವದತ್ತಿ ತಾಲ್ಲೂಕಿನ ಸತ್ತಿಗೇರಿಯ ಕಲ್ಲಪ್ಪ ಅವರು, ರಾಯಬಾಗ ತಾಲ್ಲೂಕಿನ ನಿಡಗುಂದಿಯ ಹುಕ್ಕೇರಿ ತೋಟದ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.