ಧಾರವಾಡ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿದ್ದರೂ ನೀರಿನ ಸಮಸ್ಯೆ ಉಂಟಾಗುತ್ತಿದೆ, ಅಂರ್ತಜಲಮಟ್ಟ ಕುಸಿಯುತ್ತಿದೆ. ಕೋಳವೆಬಾವಿಗಳು ಬತ್ತುತ್ತಿವೆ. ಇದಕ್ಕೆ ಕಾರಣ ನಮ್ಮಲ್ಲಿ ಜಲಸಾಕ್ಷರತೆ ಕಡಿಮೆ ಇರುವುದು. ಆದ್ದರಿಂದ ಜಿಲ್ಲೆಯಲ್ಲಿ ಜಲ ಸಂರಕ್ಷಣದ ಆಂದೋಲನವನ್ನು ಒಂದು ಗ್ರಾಮ ಒಂದು ಕೆರೆ ಯೋಜನೆ ಮೂಲಕ ಮಾಡಲಾಗುತ್ತದೆ ಎಂದು ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ನಿನ್ನೆ(ಏ.06) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ದಿಗಾಗಿ ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆ ಜರುಗಿಸಿ, ಮಾತನಾಡಿದರು.
ಜಿಲ್ಲೆಯಲ್ಲಿ 1206 ಕೆರೆಗಳಿವೆ. ಪ್ರತಿ ವರ್ಷ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ಯ, ಸಣ್ಣ ನಿರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮ ಪಂಚಾಯತ, ಲೋಕೋಪಯೋಗಿ, ಅರಣ್ಯ ಹೀಗೆ ವಿವಿಧ ಇಲಾಖೆಗಳಿಂದ ಹೂಳೆತ್ತುವ ಕಾಮಗಾರಿ, ಬಂಡು ಕಟ್ಟುವ ಕಾಮಗಾರಿ, ಪಿಚ್ಚಿಂಗ್ ವರ್ಕ ಹೀಗೆ ಕಾಮಗಾರಿ ಮಾಡಲಾಗುತ್ತದೆ. ಆದರೆ ಅದರ ಪ್ರತಿಫಲ ಅಷ್ಟಾಗಿ ಕಾಣುತ್ತಿಲ್ಲ ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳಲ್ಲಿನ ಪರಸ್ಪರ ಸಮನ್ವಯದ ಕೊರತೆ ಮತ್ತು ಸಮಗ್ರ ಅಭಿವೃದ್ಧಿ ಕುರಿತ ಆಲೋಚನೆ ಇಲ್ಲದೆ ಇರುವುದು, ಕೆರೆಗಳ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ ಎಂದು ಅವರು ಹೇಳಿದರು.
ಧಾರವಾಡ ಜಿಲ್ಲೆಯಲ್ಲಿ ಪ್ರತಿಯೊಂದು ಗ್ರಾಮಕ್ಕೆ ಒಂದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಜಿಲ್ಲಾಡಳಿತದಿಂದ ಒಂದು ಗ್ರಾಮ-ಒಂದು ಕೆರೆ ಯೋಜನೆಯನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಈ ಯೋಜನೆಯನ್ನು ಗ್ರಾಮಸ್ಥರ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಜಿಲ್ಲೆಯ 1206 ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಯೋಜಿಸಲಾಗಿದ್ದು, ಹಂತಹAತವಾಗಿ ಕೆರೆಗಳನ್ನು ಈ ಯೋಜನೆಗೆ ಒಳಪಡಿಸಲಾಗುವುದು. ಮೊದಲ ಹಂತದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಹಾಗೂ ಸಣ್ಣ ನಿರಾವರಿ ಇಲಾಖೆಯ ಕೆರೆಗಳನ್ನು ತೆಗೆದುಕೊಳ್ಳಲಾಗುವುದು. ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳು ಈ ಕುರಿತು ಸ್ಪಷ್ಟವಾದ ಮಾಹಿತಿ ಮತ್ತು ನೀಲನಕ್ಷೆಯೊಂದಿಗೆ ಮುಂದಿನ ಸಭೆಯೊಳಗಾಗಿ ಕ್ರಿಯಾಯೋಜನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಾರ್ವಜನಿಕರ ಸಹಭಾಗಿತ್ವ: ಒಂದು ಗ್ರಾಮ-ಒಂದು ಕೆರೆ ಯೋಜನೆಯಲ್ಲಿ ತೆಗೆದುಕೊಳ್ಳುವ ಕೆರೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸಾರ್ವಜನಿಕರ ಸಹಕಾರ ಮತ್ತು ಸಕ್ರಿಯ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ. ಸಾಧ್ಯವಾದಷ್ಟು ಗ್ರಾಮೀಣ ಕೆರೆಗಳನ್ನು ನರೇಗಾ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಕ್ರಮವಹಿಸಬೇಕು. ಜನರಿಗೆ ತಮ್ಮ ಊರಿನ ಕೆರೆ ಬಗ್ಗೆ ಅಭಿಮಾನ, ಪ್ರೀತಿ, ಭಕ್ತಿ ಇರುತ್ತದೆ. ಅವರು ಈ ಕೆರೆ ಅಭಿವೃದ್ಧಿ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ಭಾಗಿ ಆಗುತ್ತಾರೆ. ಈ ಕುರಿತು ಗ್ರಾಮಸಭೆ ಮತ್ತು ವಿಶೇಷ ಸಭೆಗಳನ್ನು ಗ್ರಾಮಗಳಲ್ಲಿ ಆಯೋಜಿಸುವ ಮೂಲಕ ಗ್ರಾಮ ಪಂಚಾಯತ, ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ನಿರಾವರಿ ಇಲಾಖೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚಿಸಿದರು.
ಶೇ.100 ರಷ್ಟು ಕೆರೆಗಳ ಸರ್ವೆ ಆಗಿದೆ; ಅದನ್ನು ಕಾಪಾಡಿ: ಈಗಾಗಲೇ ಜಿಲ್ಲೆಯ ಎಲ್ಲ ಕೆರೆಗಳನ್ನು ಭೂಮಾಪನ ಇಲಾಖೆಯಿಂದ ಸರ್ವೆ ಮಾಡಲಾಗಿದೆ. ಕೆರೆ ಜಮೀನು ಅತಿಕ್ರಮಣವಾಗಿದ್ದಲ್ಲಿ ಅದನ್ನು ಸಹ ಗುರತಿಸಲಾಗಿದೆ. ಅಗತ್ಯವಿದ್ದಲ್ಲಿ ಪೊಲೀಸ್ ಸಹಕಾರ ಪಡೆದು ಒತ್ತುವರಿ ತೆರವುಗೊಳಿಸುವುದು ಆಯಾ ಕೆರೆಗಳ ಮಾಲೀಕತ್ವ ಹೊಂದಿರುವ ಆಯಾ ಇಲಾಖೆ ಅಧಿಕಾರಿಗಳ ಜವಾಬ್ದರಿ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಕೆರೆ ಸರ್ವೆ ಮಾಡಿ, ಬಾನಕಂ ಗುರುತು ಕಲ್ಲುಗಳನ್ನು ಕೆರೆಯ ಸುತ್ತಲೂ ಹಾಕಿದ್ದರೂ ಕೆಲವರು ಅಂತಹ ಸರ್ವೆ ಕಲ್ಲುಗಳನ್ನು ಮತ್ತೆ ಕಿತ್ತು ಹಾಕಿ, ಕೆರೆ ಭೂಮಿ ಒತ್ತುವರಿ ಮಾಡಿದ್ದು ಕಂಡುಬAದಿದೆ. ಕೆರೆ ಮಾಲೀಕತ್ವ ಹೊಂದಿರುವ ಇಲಾಖೆ ಅಧಿಕಾರಿಗಳು ಇದನ್ನು ಪರಿಶೀಲಿಸಿ, ಗುರುತು ಕಲ್ಲುಗಳನ್ನು ಕಿತ್ತುಹಾಕಿ ಕಾನೂನುಬಾಹಿರವಾಗಿ ಕೆರೆ ಒತ್ತುವರಿ ಮಾಡಿದವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿಷ್ಕಾಳಜಿ ತೋರಿದಲ್ಲಿ ಅಂತಹ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಮಗ್ರ ಕೆರೆ ಅಭಿವೃದ್ಧಿಗೆ ಆಧ್ಯತೆ: ಒಂದು ಗ್ರಾಮ ಒಂದು ಕೆರೆ ಯೋಜನೆಯಡಿ ಆಯ್ಜೆ ಮಾಡುವ ಕೆರೆಯನ್ನು ಹೂಳೆತ್ತುವ, ಸುತ್ತಲೂ ವಾಕಿಂಗ್ ಪಥ ಮಾಡುವ, ಹೂವು, ನೆರಳಿನ ಗಿಡ ನೇಡುವ, ವಿಶ್ರಾಂತಿಗೆ ಆಸನಗಳು, ಕುಡಿಯುವ ನೀರು ಕಲ್ಪಿಸಲಾಗುತ್ತದೆ. ಅನುಕೂಲ ಮತ್ತು ಸಾಧ್ಯತೆಗಳನ್ನು ಪರಿಶೀಲಿಸಿ ಅಲ್ಲಿ ಬೊಟಿಂಗ್, ಜಲಕ್ರೀಡೆಗಳಿಗೆ ಪಿಪಿಪಿ ಮಾದರಿಯಲ್ಲಿ ವ್ಯವಸ್ಥೆ ಮಾಡುವ ವಿಚಾರವಿದೆ. ಆಯಾ ಗ್ರಾಮಗಳ ಜನರ ಆಸಕ್ತಿ ಮತ್ತು ಕೆರೆ ಮಾಲೀಕತ್ವವಿರುವ ಇಲಾಖೆಗಳ ಇಚ್ಚಾಸಕ್ತಿಯು ಈ ಅಭಿವೃದ್ಧಿ ಕಾರ್ಯಗಳನ್ನು ಅವಲಂಬಿಸಿದೆ ಎಂದರು.
ಕೆರೆಗಳ ಅಭಿವೃದ್ದಿಗೆ ಅನುದಾನವಿದೆ: ಕೆರೆಗಳ ಅಭಿವೃದ್ಧಿಗೆ, ಕೆರೆಗಳ ಸುತ್ತಲೂ ಬೇಲಿ ನಿರ್ಮಿಸಲು ಅನುದಾನವಿದೆ. ರಾಜ್ಯ ಕೆರೆ ಅಭಿವೃದ್ದಿ ಪ್ರಾಧಿಕಾರಕ್ಕೆ ಹಾಗೂ ಸರಕಾರಿ ಸ್ವತ್ತು ಸಂರಕ್ಷಣಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅನುದಾನ ಸಿಗುತ್ತದೆ. ಬೇರೆ ಇಲಾಖೆಗಳಲ್ಲಿಯೂ ಪ್ರತಿ ವರ್ಷ ಕೆರೆಗಳ ದುರಸ್ತಿ, ಪುನರುಜ್ಜೀವನ, ಹೂಳೆತ್ತುವ ಕಾಮಗಾರಿಗಳಿಗೆ ಅನುದಾನ ಬರುತ್ತದೆ. ನರೇಗಾದಲ್ಲೂ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅವಕಾಶಗಳಿವೆ. ದೊಡ್ಡ ಉದ್ಯಮಿಗಳು, ಕೈಗಾರಿಗಳು, ಎಂಎನ್ಸಿಗಳು ತಮ್ಮ ಸಿಎಸ್ಆರ್ ನಿಧಿಯಲ್ಲಿ ಕೆರೆಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬರುತ್ತವೆ. ಸರಕಾರದ ವಿಶೇಷ ಅನುದಾನ ಮತ್ತು ಇವರೆಲ್ಲರ ಸಹಕಾರದಲ್ಲಿ, ಸಾರ್ವಜನಿಕರ ಸಹಭಾಗಿತ್ವದಲ್ಲಿ ಒಂದು ಗ್ರಾಮ ಒಂದು ಕೆರೆ ಯೋಜನೆಯನ್ನು ಧಾರವಾಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ, ರಾಜ್ಯಕ್ಕೆ, ರಾಜ್ಯದ ರೈತರಿಗೆ ಮಾದರಿಗೊಳಿಸೋಣ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯ ಕೆರೆಗಳು: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಒಟ್ಟು 1206 ಕೆರೆಗಳಿವೆ. ಧಾರವಾಡ 188, ಅಳ್ನಾವರ 58, ನವಲಗುಂದ 50, ಅಣ್ಣಿಗೇರಿ 20, ಹುಬ್ಬಳ್ಳಿ 104, ಕಲಘಟಗಿ 666, ಕುಂದಗೋಳ 102 ಮತ್ತು ಹುಬ್ಬಳ್ಳಿ ನಗರ 18 ಕೆರೆಗಳಿವೆ. ಈ ಎಲ್ಲ 1206 ಕೆರೆಗಳನ್ನು ಸಂಪೂರ್ಣ ಸರ್ವೆ ಮಾಡಲಾಗಿದೆ. ಮತ್ತು ಈ ಪೈಕಿ 124 ಕೆರೆಗಳಿಗೆ ಸಂಬAದಿಸಿದAತೆ ಒತ್ತುವರಿ ಆಗಿದ್ದ 183 ಎಕರೆ, 31 ಗುಂಟೆ ಜಮೀನನ್ನು ಮರಳಿ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಸಭೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಎಫ್.ದೊಡ್ಡಮನಿ ಅವರು ಮಾತನಾಡಿ, ಕೆಲಗೇರಿ ಕೆರೆ, ಉಣಕಲ್ಲ ಕೆರೆ ಸೇರದಂತೆ ಅನೇಕ ಕೆರೆಗಳ ಬಗ್ಗೆ ಸಾರ್ವಜನಿಕರಿಂದ ತಮ್ಮ ಪ್ರಾಧಿಕಾರಕ್ಕೂ ಮತ್ತು ರಾಜ್ಯ ಉಚ್ಚ ನ್ಯಾಯಾಲಯಕ್ಕೂ ದೂರುಗಳು ಸಲ್ಲಿಕೆ ಆಗಿವೆ. ಈ ಕುರಿತು ಸಂಬAದಿಸಿದ ಇಲಾಖೆಗಳಿಗೆ ಪತ್ರ ಬರೆದು ಸೂಕ್ತ ಕ್ರಮವಹಿಸಿ, ವರದಿ ಸಲ್ಲಿಸಲು ತಿಳಿಸಲಾಗಿದೆ. ಕೆರೆ ಒತ್ತುವರಿ ಮಾಡುವವರ, ಕೆರೆಗಳಿಗೆ ಚರಂಡಿ ನೀರು, ಕಲ್ಮಷ ನೀರು ಬಿಡುವವರ ವಿರುದ್ಧ ನಿರ್ಧಾಕ್ಷಣ್ಯವಾಗಿ ಕ್ರಮ ಜರುಗಿಸಿ, ಕೆರೆಗಳ ರಕ್ಷಣೆ ಆಗಬೇಕು. ಈ ನಿಟ್ಟನಲ್ಲಿ ಕಾನೂನು ಸೇವಾ ಪ್ರಾಧಿಕಾರ ನಿಮ್ಮೊಂದಿಗೆ ಇದೆ. ಯಾವ ಒತ್ತಡ, ಶಿಫಾರಸ್ಸುಗಳಿಗೆ ಒಳಗಾಗದೇ, ನಿಯಮಾನುಸಾರ ಕ್ರಮ ಜರುಗಿಸಿ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ ಅವರು ಮಾತನಾಡಿ, ನರೇಗಾ ಯೋಜನೆಯಡಿ ಪ್ರಸಕ್ತ ಸಾಲಿಗೆ 328 ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ಅನುಮೋದನೆ ಆಗಿದೆ. ಆದಾಗ್ಯೂ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಈ ವರ್ಷ ಅಭಿವೃದ್ಧಿಪಡಿಸಲು ತೆಗೆದುಕೊಂಡಿರುವ ಕೆರೆಗಳು ಸೇರಿದಂತೆ ಉಳಿದ ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಒಂದು ಗ್ರಾಮ ಒಂದು ಕೆರೆ ಯೋಜನೆಯ ನೀಲನಕ್ಷೆ ಮತ್ತು ಕ್ರಿಯಾಯೋಜನೆ ರೂಪಿಸಿ, ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಮಾತನಾಡಿ, ಎಲ್ಲ ತಹಸಿಲ್ದಾರ ಕಚೇರಿಗಳಿಂದ ಮಾಹಿತಿ ಪಡೆದು, ಕೆರೆಗಳ ಅಳತೆ, ಒತ್ತುವರಿ ಕುರಿತ ಸಮಗ್ರ ಮಾಹಿತಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.
ಭೂದಾಖಲೆಗಳ ಇಲಾಖೆ ಉಪ ನಿರ್ದೇಶಕ ಮೋಹನ ಶಿವಣ್ಣನವರ ಮಾತನಾಡಿ, ಜಿಲ್ಲೆಯ ಎಲ್ಲ ನಗರ ಮತ್ತು ಗ್ರಾಮೀಣ ಭಾಗದ ಕೆರೆಗಳನ್ನು ಈಗಾಗಲೇ ಸರ್ವೆ ಮಾಡಿ, ಗಡಿ ಗುರುತಿಸಲಾಗಿದೆ. ಕೆರೆಗಳ ನಕ್ಷೆಯನ್ನು ತಯ್ಯಾರಿಸಲಾಗಿದೆ ಎಂದು ಹೇಳಿದರು.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಅಧೀಕ್ಷಕ ಅಭಿಯಂತರ ತಿಮ್ಮಪ್ಪ ಅವರು ಮಾತನಾಡಿ, ಅವಳಿನಗರ ವ್ಯಾಪ್ತಿಯ ಕೆರಗಳ ಅಭಿವೃದ್ಧಿ ಮತ್ತು ಸೌಂದರ್ಯಿಕರಣಕ್ಕೆ ಕ್ರಿಯಾಯೋಜನೆ ರೂಪಿಸಿ, ನಗರಾಭಿವೃದ್ಧಿ ಇಲಾಖೆಗೆ ಸಲ್ಲುಸಲಾಗಿದೆ. ಸ್ಮಾರ್ಟ ಸಿಟಿ ಯೋಜನೆ, ಹುಡಾದಿಂದ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದಶಕ ರಮೇಶ ಬಿ.ಎಸ್., ಅವರು ಮಾತನಾಡಿ, ಅಳ್ನಾವರ, ಕಲಘಟಗಿ, ಕುಂದಗೋಳ, ನವಲಗುಂದ ಮತ್ತು ಅಣ್ಣಿಗೇರಿ ನಗರ ಸ್ಥಳೀಯ ಸಂಸ್ಸ್ಥೆಗಳ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಿ, ಪೌರಾಡಳಿತ ನಿರ್ದೇಶನಾಲಯಕ್ಕೆ ಸಲ್ಲಿಸಲಾಗಿದ್ದು, ಅನುಮೋದನೆ ಬಂದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ, ಮಧ್ಯಮ ಮತ್ತು ಬೃಹತ್ ನೀರಾವರಿ, ಗ್ರಾಮೀಣ ಅಭೀವೃದ್ಧಿ ಮತ್ತು ಪಂಚಾಯತ ರಾಜ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.