Tuesday, April 29, 2025
Google search engine
Homeಅಂಕಣಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬೆಂಬಲಿಗರಿಂದ: ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ !
spot_img

ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬೆಂಬಲಿಗರಿಂದ: ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ !

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರವಾಗಿ ಇಂದು ಸುವರ್ಣ ಸೌದ ಕೆಂಡದಂತೆ ಬದಲಾಗಿದ್ದು. ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು  ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಪಿ.ಎ ಸಂಗಮೇಶ್ ಸೇರಿದಂತೆ ಅನೇಕ ಬೆಂಬಲಿಗರು ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದು. ಕೂದಲೆಳೆ ಅಂತರದಲ್ಲಿ ಸಿ.ಟಿ ರವಿ ಪಾರಾಗಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮಾರ್ಷಲ್ಗಳು ಉದ್ರಿಕ್ತರನ್ನು ತಡೆದಿದ್ದು. ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಸ್ಥಳಕ್ಕೆ ಬೆಳಗಾವಿ ಪೊಲೀಸ್ ಆಯುಕ್ತ ಯಡಮಾರ್ಟಿನ್ ಭೇಟಿ ನೀಡಿದ್ದು. ಪರಿಸ್ಥಿತಿಯನ್ನು ಹತೋಟಿಗೆತರಲು ಯತ್ನಿಸುತ್ತಿದ್ದಾರೆ.

ನನ್ನ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದ ಸಿ,ಟಿ ರವಿ !

ಹಲ್ಲೆ ವಿಚಾರವಾಗಿ ಮಾತನಾಡಿದ ಸಿ.ಟಿ ರವಿ ‘ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ನನ್ನ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದು. ಚಿಕ್ಕಮಗಳೂರಿನಲ್ಲಿರುವ ಸಿ.ಟಿ ರವಿ ಅವರ ನಿವಾಸಕ್ಕೆ ಪೊಲೀಸರು ಭದ್ರತೆ ಹೊದಗಿಸಿದ್ದಾರೆ ಎಂದು ತಿಳಿದು ಬಂದಿದೆ

RELATED ARTICLES
- Advertisment -spot_img

Most Popular

error: Content is protected !!