ಹುಕ್ಕೇರಿ: ಕಾರು ಸಮೇತ ನದಿಗೆ ಬಿದ್ದು ವ್ಯಕ್ತಿ ಸಾವನ್ನುಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಣಕನಹೊಲಿ ಗ್ರಾಮ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ.
ಕಿರಣ್ ಲಕ್ಷ್ಮಣ್ ನಾವಲಗಿ 45 ಮೃತ ದುರ್ದೈವಿ. ಮೃತ ಕಿರಣ್ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ನಿವಾಸಿ ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದ ಮೃತ ಕಿರಣ್ ಡಿಸೆಂಬರ್ 30ರಂದು ಮನೆಯಲ್ಲಿ ಯಾರಿಗೂ ಹೇಳದೆ ಕಾರು ತೆಗೆದುಕೊಂಡು ತೆರಳಿದ್ದ.
ಉದ್ಯಮದಲ್ಲಿ ನಷ್ಟ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮುಖನ ಮಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ನದಿಯಲ್ಲಿ ಬಿದ್ದಿದ್ದ ಕಾರು ಹಾಗೂ ಶವವನ್ನು ಹೊರತೆಗೆದಿದ್ದಾರೆ. ಯಂಕನವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ