Thursday, June 19, 2025
Google search engine
Homeಕ್ರೈಂಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ !
spot_img

ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ !

ರಾಯಚೂರು: ಪೊಲೀಸರು ನೀಡುತ್ತಿದ್ದ ಕಿರುಕುಳವನ್ನು ಸಹಿಸದ ವ್ಯಕ್ತಿಯೋರ್ವ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸುನೀಲ್ ಎಂದು ಗುರುತಿಸಲಾಗಿದೆ.

ರಾಯಚೂರು ನಗರದ ನೇತಾಜಿ ಠಾಣೆಯ ಪೊಲೀಸರು ಸುನಿಲ್ ಎಂಬಾತನಿಗೆ ಕಿರುಕುಳ ನೀಡುತ್ತಿದ್ದರು. ಗಾಂಜಾ ಮಾರಾಟ ಮಾಡುತ್ತಿದ್ದೀಯ ಎಂದು ಆರೋಪಿಸಿ ಒಂದು ಲಕ್ಷ ಹಣವನ್ನು ನೀಡುವಂತೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕಿರುಕುಳವನ್ನು ಸಹಿಸದೆ ಸುನೀಲ್ ಡಿಸೆಂಬರ್ 28ರಂದು ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸುನೀಲ್ ಸ್ಥಿತಿ ಗಂಭೀರವಾಗಿದ್ದು, ಆತನನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -spot_img

Most Popular

error: Content is protected !!