ಬೆಳಗಾವಿ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜಿಪಂ ಸಿಇಒ ರಾಹುಲ್ ಶಿಂಧೆ ಅವರ ಅಧ್ಯಕ್ಷತೆಯಲ್ಲಿ ಗ್ರಾಪಂಗಳಲ್ಲಿ ಸೇವೆ ಸಲ್ಲಿಸುವಾಗ ಮರಣ ಹೊಂದಿದವರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವ ಕುರಿತು ಸಮಿತಿಯ ಸಭೆ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಮರಣ ಹೊಂದಿದ ಕರವಸೂಲಿಗಾರ, ಕ್ಲರ್ಕ, ಕ್ಲರ್ಕ ಕಂ. ಡಾಟಾ ಎಂಟ್ರಿ ಆಪರೇಟರ್, ವಾಟರಮೆನ್, ಸಿಪಾಯಿ, ಸ್ವಚ್ಛತಾಗಾರ ರವರ ಕುಟುಂಬಗಳಿಗೆ ಅನುಕಂಪ ಆಧಾರದ ಮೇಲೆ 27 ಜನರ ಅವಲಂಬಿತರಿಗೆ ಸದರಿ ಗ್ರಾಪಂಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡುವ ಕುರಿತು ದಾಖಲೆಗಳನ್ನು ಪರಿಶೀಲನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯ ಆಗಿರುವ ಜಿಪಂ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಹರ್ಷ ಎಸ್., ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಎಫ್.ಯು. ಪೂಜೇರ, ಹಾಗೂ ಸಂಬಂಧಪಟ್ಟ ಗ್ರಾಪಂ ಅಧ್ಯಕ್ಷರು ಮತ್ತಿತರತು ಉಪಸ್ಥಿತರಿದ್ದರು.