Tuesday, April 29, 2025
Google search engine
Homeಅಂಕಣಕೆಪಿಸಿಸಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ, ಸುರ್ಜೇವಾಲರನ್ನು ಭೇಟಿ ಮಾಡಿ ಬೇಡಿಕೆ ಇಟ್ಟ ಸಚಿವ‌ ಸತೀಶ್...
spot_img

ಕೆಪಿಸಿಸಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ, ಸುರ್ಜೇವಾಲರನ್ನು ಭೇಟಿ ಮಾಡಿ ಬೇಡಿಕೆ ಇಟ್ಟ ಸಚಿವ‌ ಸತೀಶ್ ಜಾರಕಿಹೊಳಿ!

ಬೆಂಗಳೂರು: ಕೆಪಿಸಿಸಿ ಅದಷ್ಟು ಶೀಘ್ರ ಹೊಸ ಅಧ್ಯಕ್ಷರ ನೇಮಕ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಬೇಡಿಕೆ ಇಟ್ಟಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿಯ ಮಾಹಿತಿ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ರಾತ್ರಿ ಸುರ್ಜೆವಾಲಾರನ್ನು ಭೇಟಿ ಮಾಡಿದ್ದೇನೆ. ಪಕ್ಷದ ಆಗುಹೋಗುಗಳು ಹಾಗೂ ಸಂಘಟನೆ ಬಗ್ಗೆ ಚರ್ಚೆ ಮಾಡಿದೆ. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ ಎಂದರು.

 

ಸದ್ಯ ಡಿಕೆ ಶಿವಕಮಾರ್ ಅವರು ಅಧ್ಯಕ್ಷರಾಗಿದ್ದು, ಇವರನ್ನೇ ಮುಂದುವರಿಸುವುದಾದರೆ ಅದನ್ನು ಸ್ಪಷ್ಟಪಡಿಸಿ ಅಂತ ಹೇಳಿದ್ದೇನೆ. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ಮತ ಸೆಳೆಯುವವರನ್ನು ಹಾಗೂ ವರ್ಚಸ್ಸು ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ ಅಂತ ಹೇಳಿದ್ದೇನೆ ಎಂದರು.

 

ನನಗೇ ಅಧ್ಯಕ್ಷ ಮಾಡಿ ಅಂತ ಕೇಳಿಲ್ಲ. ಆದರೆ ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ಮಾಡಿ ಎಂದು ಹೇಳಿದ್ದೇನೆ. ಇವರು ಇರಬೇಕು ಬೇಡ ಎಂಬ ಬಗ್ಗೆ ಗೊಂದಲಗಳಿವೆ. ಹೀಗಾಗಿ ಎಲ್ಲ ಗೊಂದಲ ಗಳಿಗೆ ಇತಿಶ್ರಿ ಹಾಡಿ ಎಂದು ಸುರ್ಜೆವಾಲಾಗೆ ಹೇಳಿದ್ದೇನೆ. ಡಿಕೆಶಿ ಅವರೇ ಮುಂದುವರಿಬೇಕಾ ಬೇಡ್ವಾ ಎನ್ನೋದನ್ನು ಹೈಕಮಾಂಡ್ ಹೇಳಲಿ ಎಂದರು.

 

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇರಬೇಕಾ ಬೇಡವಾ ಎಂಬುದು ಪಕ್ಷದ ಮೇಲ್ಮಟ್ಟದಲ್ಲಿ ಚರ್ಚೆ ಆಗಬೇಕು. ಬೇರೆಯವರು ಅಧ್ಯಕ್ಷ ಆಗಬೇಕಾ ಬೇಡ್ವಾ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡಲಿ. ನಾವೆಲ್ಲ ಇಲಾಖೆಗಳ ಮಂತ್ರಿಗಳಾದ ಮೇಲೆ ಪಕ್ಷಕ್ಕೆ ಟೈಮ್ ಕೊಡುವವರ ಸಂಖ್ಯೆ ಕಡಿಮೆ ಆಗಿದೆ ಎಂದರು ತಿಳಿಸಿದರು.

 

ಪಕ್ಷದ ಸಂಘಟನೆಯ ದೃಷ್ಟಿಯಿಂದ 2023 ರಲ್ಲಿ ಇದ್ದ ವೇಗ ಕುಂಠಿತವಾಗಿದೆ. ಲೋಕಸಭೆ ಚುನಾವಣೆ ಆದಮೇಲೆ ಅಧ್ಯಕ್ಷರನ್ನು ಬದಲಾವಣೆ ಮಾಡ್ತೀವಿ ಎಂಬುದು ಎಐಸಿಸಿ ನೋಟ್ ಇದೆ. ಕೆಸಿ ವೇಣುಗೋಪಾಲ ಅವರೇ ಬರೆದ ನೋಟ್ ಇದೆ. ಲೋಕಸಭೆ ಚುನಾವಣೆ ಮುಗಿದು ಆರು ತಿಂಗಳ ಮೇಲಾಯಿತು. ಅದನ್ನು ಜಾರಿಗೆ ಅನುಷ್ಟಾನಕ್ಕೆ ತರಬೇಕಲ್ವಾ? ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.

 

ಇಲ್ಲದಿದ್ದರೆ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅವರೇ ಮುಂದುವರಿಬೇಕಾ ಬೇಡವಾ ಎಂಬ ಬಗ್ಗೆಯೂ ಹೈಕಮಾಂಡ್ ಸ್ಪಷ್ಟವಾಗಿ ಹೇಳಲಿ. ಹೈಕಮಾಂಡ್ ಶಾಸಕರ ಅಭಿಪ್ರಾಯ ಕೂಡ ಬೇಕಿದ್ದರೆ ಪಡೆಯಲಿ ಎಂದು ಇದೇ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.

 

ದಲಿತ ಸಚಿವರು, ಶಾಸಕರು ಮತ್ತೆ ಸಭೆ ಸೇರುವ ವಿಚಾರವಾಗಿ ಮಾತನಾಡಿ, ಅದಕ್ಕೆ ಅಧ್ಯಕ್ಷರು ಬೇರೆ ನಾನು ಮೆಂಬರ್ ಇದ್ದಾರೆ. ಅವರು ಹೋಸ್ಟ್ ಮಾಡಿದ್ದು ಊಟ ಅರೇಂಜ್ ಮಾಡಿದ್ದು ಅವರು. ಅವರೇ ಎಲ್ಲಾ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.

 

ದೆಹಲಿ ಹೋಗೋ ವಿಚಾರವಾಗಿ ಮಾತನಾಡಿ, ನಾವು ದೆಹಲಿಗೆ ಹೋಗೋದು ಏನಿಲ್ಲ. ಬೇರೆ ಕೆಲಸಕ್ಕೆ ನಾವು ಹೋಗ್ತೀವಿ ಅಷ್ಟೆ ಎಂದು ಸ್ಪಷ್ಟಪರಿಸಿದರು. ಜಾತಿ ಗಣತಿ ವಿಚಾರವಾಗಿ ಗುರುವಾರ ಸಂಪುಟ ಸಭೆಯಲ್ಲಿ ಏನಾಗುತ್ತದೆ ಎಂಬುವುದನ್ನು ನೋಡಬೇಕು. ವರದಿ ಜಾರಿಗೆ ಸಮಯಾವಕಾಶ ಬೇಕಾಗುತ್ತದೆ ಎಂದರು.

RELATED ARTICLES
- Advertisment -spot_img

Most Popular

error: Content is protected !!