ಬೆಳಗಾವಿ: ಬೆಂಗಳೂರಿನಲ್ಲಿ ನಡೆದ ಸಿಎಲ್ ಪಿ ಸಭೆಯಲ್ಲಿ ಬೆಳಗಾವಿ ಡಿಸಿಸಿ ಕಚೇರಿ ಕಟ್ಟಡ ನಿರ್ಮಾಣ ವಿಚಾರದಲ್ಲಿ ಡಿಕೆಶಿ ಹಾಗೂ ಲಕ್ಷ್ಮಿ ಹೆಬ್ಬಾಳಕರ್ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೋಳಿ ವಿರೋಧ ವ್ಯಕ್ತಪಡಿಸಿದ್ದು, ಅದರ ಬೆನ್ನಲ್ಲೇ ರಮೇಶ್ ಜಾರಕಿಹೋಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕೊಹೊಳಿ ಉಗ್ರರೂಪ ತಾಳಿದ್ರೆ ಮಾತ್ರ ಕಾಂಗ್ರೆಸ್ ನಲ್ಲಿ ಉಳಿಗಾಲ ಇದೆ. ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಾದ ವಿಚಾರದಲ್ಲಿ ಡಿಕೆಶಿ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಇದನ್ನ ವೇದಿಕೆಯಲ್ಲಿಯೇ ಪ್ರಶ್ನಿಸಿದ ಸತೀಶ ಜಾರಕೊಹೊಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. 2013-18ರಲ್ಲಿ ಕಾಂಗ್ರೆಸ್ ಶಾಸಕ ನಾನು ಇದ್ದೆ .ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದರು. ಹೈಕಮಾಂಡ್ ಮತ್ತು ರಾಜ್ಯದ ಜನತೆ ಮುಂದೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮೊದಲ ಬಾರಿಗೆ ಹೇಳಿದಾಗ ಹಾಳಾಗಿ ಹೋಗಲಿ ಅಂತ ಸತೀಶ್ ಜಾರಕೊಹೊಳಿ ಸುಮ್ಮನಿದ್ದರು. ಇಂತಹ ಸಂದರ್ಭದಲ್ಲಿ ವಿರೋಧ ಮಾಡುವ ಶಕ್ತಿಯನ್ನ ಸತೀಶ್ ಗೆ ಕೊಡಲಿ ಅಂತಾ ಲಕ್ಷ್ಮೀತಾಯಿ ದೇವರಲ್ಲಿ ಬೇಡಿಕೊಳ್ಳುವೆ. ವಿರೋಧ ಮಾಡೋ ಶಕ್ತಿ ಮಾಡುವ ಸಂದರ್ಭದಲ್ಲಿ ಮಾಡಬೇಕು. ಹೀಗಾಗಿ ವಿರೋಧ ಮಾಡಿದ ಸತೀಶ್ ಗೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ ಎಂದರು.
ಕಾಂಗ್ರೆಸ್ ಕಚೇರಿ ಇರುವ ಜಾಗ ಮಾಜಿ ಕೇಂದ್ರ ಸಚಿವ ಬಿ.ಶಂಕರಾನಂದ ಹೆಸರಲ್ಲಿತ್ತು. ಬಿ.ಶಂಕರಾನಂದ ಮಕ್ಕಳ ಆ ಜಾಗ ಕಚೇರಿಗೆ ಬಿಟ್ಟು ಕೊಡಲು ಮನವೊಲಿಸಿದೆ. ಬಳಿಕ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿ ಕಟ್ಟಡಕ್ಕೆ ಜಾಗ ಮಂಜೂರಾಯಿತು.ಆಗ ಅಂದಿನ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹಣ ತುಂಬಲು ಮನವಿ ಮಾಡಿದ್ರು. ಒಂದೇ ಹಂತದಲ್ಲಿ ಕಾಂಗ್ರೆಸ್ ಕಚೇರಿಗೆ 54 ಲಕ್ಷ ರೂಪಾಯಿ ಕಟ್ಟಬೇಕಿತ್ತು. ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಕಟ್ಟಡ ನಿರ್ಮಾಣಕ್ಕೆ ಒಟ್ಟು ಒಂದು ಕೋಟಿ 27 ಲಕ್ಷ ರೂಪಾಯಿ ನಾನು ಸ್ವಂತ ಕೊಟ್ಟಿದ್ದೀನಿ. ಕಟ್ಟಡ ನಿರ್ಮಾಣದಲ್ಲಿ ಗೋಲ್ಮಾಲ್ ಆಗಿದೆ, ಮುಂದಿನ ದಿನಗಳಲ್ಲಿ ಅದನ್ನು ಹೇಳ್ತೀನಿ. ಕಾಂಗ್ರೆಸ್ ಕಚೇರಿ ನಾನೇ ನಿರ್ಮಾಣ ಮಾಡಿದ್ದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳುತ್ತಿರೋದು ತಪ್ಪು.
ಆಗ ಇದ್ದಂತಹ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು 20 ರಿಂದ 25 ಲಕ್ಷ ಹಣ ನೀಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಷ್ಟು ಹಣ ಕೊಟ್ಟಿದ್ದಾರೆ ಅಂತಾ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಸುಳ್ಳು ಹೇಳಿದ್ದಾರೆ. ಇದನ್ನ ಖಂಡಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಗುಡುಗಿದರು