ಬೆಳಗಾವಿ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಲು ಖಾಸಗಿ ಆಸ್ಪತ್ರೆಗೆ ಗುರುವಾರ ರಾತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಮಿಸಿದರು.
ರಸ್ತೆ ಅಪಘಾತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಣೆಗೆ ಬೆಂಗಳೂರಿನಿಂದ ನೇರವಾಗಿ ಖಾಸಗಿ ಆಸ್ಪತ್ರೆಗೆ ಬಂದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರೊಂದಿಗೆ ಮೊದಲು ಆರೋಗ್ಯ ವಿಚಾರಸಿದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ಪಡೆಯುತ್ತಿರುವ ವಾಡ್೯ಗೆ ತೆರಳಿ ಆರೋಗ್ಯ ವಿಚಾರಿಸಿದರು.
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಸಚಿವೆ ಲಕ್ಷ್ಮೀ ಕಾರು ಅಪಘಾತವಾಗಿತ್ತು.ಬೆಂಗಳೂರಿನಲ್ಲಿ ವಿವಿಧ ರಾಜಕೀಯ ಕಾರ್ಯಕ್ರಮದ ನಿಮಿತ್ತ ಒತ್ತಡದಲ್ಲಿದ ಸಚಿವ ಸತೀಶ್ ಇಂದು ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಆರೋಗ್ಯ ವಿಚಾರಿಸಿದರು.