Wednesday, June 18, 2025
Google search engine
Homeರಾಜಕೀಯಶೀಘ್ರದಲ್ಲೇ BJP ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ವಿಜಯೇಂದ್ರ ಬಣದಲ್ಲಿ ಆತಂಕ
spot_img

ಶೀಘ್ರದಲ್ಲೇ BJP ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ವಿಜಯೇಂದ್ರ ಬಣದಲ್ಲಿ ಆತಂಕ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಸಂಘರ್ಷ ಮುಂದುವರೆದಿದೆ. ಇದರ ಮಧ್ಯೆ ರಾಜ್ಯ ಬಿಜೆಪಿ ಆಂತರಿಕ ಚುನಾವಣೆ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿಯೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಹೇಳಿರುವುದು ಬಿ.ವೈ. ವಿಜಯೇಂದ್ರ ಬಣದಲ್ಲಿ ತಳಮಳ ಸೃಷ್ಟಿಸಿದೆ. ರಾಜ್ಯಕ್ಕೆ ಆಗಮಿಸಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು, ರಾಜ್ಯ ಘಟಕದ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಚರ್ಚಿಸಿಯೇ ಆಯ್ಕೆ ಮಾಡುತ್ತೇವೆ.

ಬೂತ್ ಸಮಿತಿ ಅಧ್ಯಕ್ಷದಿಂದ ರಾಜ್ಯ ಘಟಕದವರೆಗೂ ಚುನಾವಣೆ ನಡೆಯಲಿದೆ ಎಂದರು. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸುವಂತೆ ಶಾಸಕರಾದ ಬಸನಗೌಡ ಪಾಟೀಲ ಯಾತ್ನಾಳ್, ರಮೇಶ್ ಜಾರಕಿಹೊಳಿ ತಂಡ ಪಟ್ಟು ಹಿಡಿದಿದೆ. ಆದರೆ ಅಧ್ಯಕ್ಷನಾಗಿ ನಾನೇ ಮುಂದುವರೆಯುವೆ ಎಂದು ವಿಜಯೇಂದ್ರ ಬಹಿರಂಗ ಹೇಳಿಕೆ ನೀಡಿರುವುದು ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

RELATED ARTICLES
- Advertisment -spot_img

Most Popular

error: Content is protected !!