ಬೆಳಗಾವಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ ಸವಾರರ ದೇಹಗಳ ಛಿದ್ರ ಛಿದ್ರವಾಗಿರುವ ಘಟನೆ ಬೆಳಗಾವಿ ತಾಲೂಕಿನ ಅಗಸಗಾ ಗ್ರಾಮದ ಹೊರವಲಯದಲ್ಲಿ ರಸ್ತೆಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಅಂಬೇವಾಡಿ ಗ್ರಾಮದ ಯೋಗೇಶ ನಾವಿ(24), ನಿತೇಶ ತರಳೆ( 27) ಮೃತ ಯುವಕರು ಎಂದು ತಿಳಿದು ಬಂದಿದೆ. ಮರಳು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರ ದೇಹಗಳ ಛಿದ್ರ ಛಿದ್ರವಾಗಿವೆ.ೀ ಘಟನೆ ನಡೆದ ಕೂಡಲೇ ಸ್ಥಳದಲ್ಲಿದ್ದ ಟಿಪ್ಪರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.