Wednesday, June 18, 2025
Google search engine
Homeಜಿಲ್ಲಾಹೆಬ್ಬಾಳ್ಕರ್‌ ವಿರುದ್ಧ ಅವಹೇಳನಕಾರಿ ಪದ ಬಳಸಿದ ಆರೋಪ: ಸಿಟಿ ರವಿಗೆ ತಾತ್ಕಾಲಿಕ ರಿಲೀಫ್‌
spot_img

ಹೆಬ್ಬಾಳ್ಕರ್‌ ವಿರುದ್ಧ ಅವಹೇಳನಕಾರಿ ಪದ ಬಳಸಿದ ಆರೋಪ: ಸಿಟಿ ರವಿಗೆ ತಾತ್ಕಾಲಿಕ ರಿಲೀಫ್‌

ಬೆಂಗಳೂರು: ಬೆಳಗಾವಿಯ ವಿಧಾನಮಂಡಲ ಅವೇಶನದಲ್ಲಿ ಸಚಿವೆ ಲಕ್ಷ್ಮೇ ಹೆಬ್ಬಾಳ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ವಿರುದ್ಧದ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ಬಾಗೇವಾಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದು ಕೋರಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ಮಾಡಿತು.

ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ”ಪ್ರಕರಣದಲ್ಲಿ ಸಾಕಷ್ಟು ವಿಚಾರಗಳು ಅಡಗಿರುವುದರಿಂದ ಆ ಬಗ್ಗೆ ಪರಿಶೀಲಿಸಿ ಉತ್ತರಿಸಬೇಕಾಗಿದೆ. ಇದರಿಂದ ಶೀಘ್ರಗತಿಯಲ್ಲಿ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳಲಾಗದು,” ಎಂದು ತಿಳಿಸಿ ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು.

ಪ್ರಕರಣದಲ್ಲಿ ದೂರುದಾರೆಯಾಗಿರುವ ಸಚಿವೆ ಹೆಬ್ಬಾಳ್ಕರ್‌ಗೆ ಹ್ಯಾಂಡ್‌ ಸಮನ್ಸ್‌ ಜಾರಿಗೊಳಿಸಲು ನಿರ್ದೇಶಿಸಿದ ನ್ಯಾಯಪೀಠ, ಅರ್ಜಿಗೆ ದೂರುದಾರರು ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಿದೆ.

ಧ್ವನಿ ಮಾದರಿ ಸಲ್ಲಿಕೆ

ತನಿಖಾಧಿಕಾರಿಗಳ ಪರ ಹಾಜರಿದ್ದ ಎಸ್‌ಪಿಪಿ ಬಿ.ಎ. ಬೆಳ್ಳಿಯಪ್ಪ, ”ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಈ ಹಿಂದೆ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿದೆ. ಇದರಿಂದ ಮ್ಯಾಜಿಸ್ಪ್ರೇಟ್‌ ಕೋರ್ಟ್‌ ಕೈ ಕಟ್ಟಿಹಾಕಿದೆ. ಮ್ಯಾಜಿಸ್ಪ್ರೇಟ್‌ ಕೋರ್ಟ್‌ಗೆ ಸಿ.ಟಿ. ರವಿ ಧ್ವನಿ ಮಾದರಿ ಸಲ್ಲಿಸಬೇಕಾಗಿದೆ. ಅದರಂತೆ ಮ್ಯಾಜಿಸ್ಪ್ರೇಟ್‌ ಕೋರ್ಟ್‌ ಪ್ರಕ್ರಿಯೆ ಮುಂದುವರಿಯಲು ಅನುಮತಿಸಬೇಕು,” ಎಂದು ಕೋರಿದರು.

ಅದಕ್ಕೆ ಆಕ್ಷೇಪಿಸಿದ ನ್ಯಾಯಮೂರ್ತಿ, ”ಒಂದು ಬಾರಿ ಪ್ರಕರಣವು ಹೈಕೋರ್ಟ್‌ನಲ್ಲಿ ಸೀಜ್‌ ಆದ ಬಳಿಕ ಮತ್ಯಾವುದೇ ಸಂಸ್ಥೆ ಅಥವಾ ನ್ಯಾಯಾಲಯಕ್ಕೆ ಪ್ರಕರಣದಲ್ಲಿ ಮುಂದುವರಿಯಲು ಅನುಮತಿಸಲಾಗದು. ತನಿಖಾಧಿಕಾರಿಗಳು ಮುಂದುವರಿಯಲು ಅನುಮತಿಸಿದರೆ ಹೈಕೋರ್ಟ್‌ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ,” ಎಂದರು.

ಬೆಳ್ಳಿಯಪ್ಪ ಉತ್ತರಿಸಿ, ”ಈ ನಿಯಮವು ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅನ್ವಯಿಸಲಿದೆ. ಆದರೆ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದಷ್ಟೇ ಆದೇಶಿಸಿದೆ. ಮಧ್ಯಂತರ ಆದೇಶ ತೆರವುಗೊಳಿಸಬೇಕು,” ಎಂದು ಕೋರಿದರು.

ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ”ಹಾಗಾದರೆ ಈಗ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡುತ್ತೇನೆ,” ಎಂದು ಆದೇಶ ಮಾಡಿದರು.

ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ”ಶಾಸನಸಭೆಯಲ್ಲಿ ಶಾಸಕರು ನೀಡಿದ ಹೇಳಿಕೆ ಅಥವಾ ಮಾಡಿದ ಚರ್ಚೆಗೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಸಂವಿಧಾನದ ಪರಿಚ್ಛೇದ 194(2) ಅಡಿಯಲ್ಲಿ ನಿರ್ಬಂಧವಿದೆ. ಕ್ರಿಮಿನಲ್‌ ಪ್ರಕರಣ ದಾಖಲಾಗಬಹುದು ಎಂಬ ಯಾವುದೇ ಭೀತಿಯಿಲ್ಲದೆ ಶಾಸಕರು ಶಾಸನ ಸಭೆಯಲ್ಲಿ ಮಾತನಾಡಬೇಕೆಂಬ ಉದ್ದೇಶದಿಂದ ಈ ನಿಯಮ ರೂಪಿಸಲಾಗಿದೆ,” ಎಂದರು.

RELATED ARTICLES
- Advertisment -spot_img

Most Popular

error: Content is protected !!