ಖಾನಾಪುರ: ರಾಜ್ಯ ಸರಕಾರ ಹಾಗೂ ಜಿಲ್ಲಾಧಿಕಾರಗಳ ಆದೇಶಕ್ಕೂ ಖಾನಾಪುರ ತಹಶಿಲ್ದಾರ ಕಚೇರಿಯಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ ಏಕೆಂದರೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ/ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತ್ವವ್ಯ ನಿರ್ವಹಿಸದೇ ನಿಯೋಜನೆ/ಅನ್ಯ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ/ಉಪವಿಭಾಗಾಧಿಕಾರಿ/ತಹಶೀಲ್ದಾರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರಕ್ಕೆ ಗಮನಕ್ಕೆ ಬಂದಿದ್ದು ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಲು ಸರ್ಕಾರ ನಿರ್ದೇಶನ ನೀಡಿರುತ್ತಾರೆ.
ಆದರೆ ಜಿಲ್ಲಾಧಿಕಾರಿಗಳು ಕಳೆದ ತಿಂಗಳು 25ನೇ ತಾರೀಖಿನಂದು ಸುವರ್ಣ ಸೌಧದಲ್ಲಿ ಸಭೆ ನಡೆಸಿ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರೂ ಖಾನಾಪುರ ತಹಶಿಲ್ದಾರಗೆ ಮಾತ್ರ ಇದ್ಯಾವದೂ ಲೆಕ್ಕಕ್ಕೆ ಇಲ್ಲವೆಂಬತೆ ಗ್ರಾಮ ಆಡಳಿತ ಅಧಿಕಾರಿಗಳನ್ನ ಬಿಡುಗಡೆಗೊಳಿಸದೆ ಸರಕಾರ ಹಾಗೂ ಜಿಲ್ಲಾಧಿಕಾರಿಗಳ ಆದೇಶಕ್ಕೆ ಅಪಮಾನವೆಸಗಿದ್ದು ಇದಕ್ಕೆ ಜಿಲ್ಲಾಧಿಕಾರಿಗಳು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಕಾದುನೋಡಬೇಕಿದೆ.
ವರದಿ:ಪ್ರಸನ್ನ ಕುಂಬಾರ
ಖಾನಾಪುರ