ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದಾರೆ ಎಂದು ಆರೋಪಿಸಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ ಮಂಗಳವಾರ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟಿಸಿದರು.
ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ಪ್ರತಿಭಟಿಸಿ ಡಿ.ಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಯುವರಾಜ ಜಾಧವ,ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಗುರುಪ್ರಸಾದ ಕೋತಿನ್, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ,ಬಿ.ಜೆ.ಪಿ ಮುಖಂಡರಾದ ವಿಠ್ಠಲ ಸಾಯನ್ನವರ, ವೀರಭದ್ರಯ್ಯ ಪೂಜಾರ, ಮಲ್ಲಪ್ಪಾ ಕಾಂಬಳೆ, ಮಾರುತಿ ಜೋಗಾನಿ, ವಿಕ್ರಮ ಸೋನಜಿ, ರಾಜದೀಪ ಜಾಧವ,ಅಡವೇಶ ಅಂಗಡಿ, ನಿತಿನ್ ದೇಸಾಯಿ ಪಿರಾಜಿ ಕಣಬರ್ಗಿ, ಶೇಖರ ಕಾಲೇರಿ, ಅಭಯ ಅವಲಕ್ಕಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು