Wednesday, June 18, 2025
Google search engine
Homeಜಿಲ್ಲಾತ್ವರೀತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವದು :ನೂತನ ನ್ಯಾಯಾಧೀಶ ಗುರು ಪ್ರಸಾದ.
spot_img

ತ್ವರೀತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವದು :ನೂತನ ನ್ಯಾಯಾಧೀಶ ಗುರು ಪ್ರಸಾದ.

: ಹುಕ್ಕೇರಿ :ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ ಮಾಡಲಾಗುವದು ಎಂದು ನೂತನ ಕಿರಿಯ ನ್ಯಾಯಾಧೀಶ ಗುರು ಪ್ರಸಾದ ಹೇಳಿದರು.

 ಇಂದು ಹುಕ್ಕೇರಿ ಕಾನೂನು ಸೇವಾ ಸಮಿತಿ ಮತ್ತು ನ್ಯಾಯವಾದಿಗಳ ಸಂಘದ ವತಿಯಿಂದ ಅಯೋಜಿಸಿದ ನೂತನ ನ್ಯಾಯಾಧೀಶ ಗುರು ಪ್ರಸಾದ ರವರಿಗೆ ಸ್ವಾಗತ ಹಾಗೂ ನಿರ್ಗಮಿತ ಪ್ರಭಾರಿ ನ್ಯಾಯಾಧೀಶ ನೇಮಚಂದ್ರ ರವರಿಗೆ ಬಿಳ್ಕೋಡುಗೆ ಸಮಾರಂಭದಲ್ಲಿ  ಅಭಿಪ್ರಾಯ ವ್ಯಕ್ತ ಪಡಿಸಿದರು.

ಹಿರಿಯ ನ್ಯಾಯವಾದಿಗಳಾದ ಪಿ ಆರ್ ಚೌಗಲಾ, ಪಾಸಪ್ಪಗೋಳ, ಎಮ್ ಎಮ್ ಪಾಟೀಲ, ಬಿ ಆರ್ ಚಂದರಗಿ ,ದಡ್ಡಿಮನಿ ಮೊದಲಾದವರು ನೂತನ ನ್ಯಾಯಾಧೀಶರಿಗೆ ಮತ್ತು ನಿರ್ಗಮಿಸುತ್ತಿರುವ ನ್ಯಾಯಾಧೀಶರಿಗೆ ಸತ್ಕರಿಸಿ ಅಭಿನಂದಿಸಿದರು.

 

ವೇದಿಕೆ ಮೇಲೆ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ, ನ್ಯಾಯವಾದಿಗಳ ಸಂಘದ ಅದ್ಯಕ್ಷ ಕಾಡಪ್ಪಾ ಕುರಬೇಟ, ಉಪಾದ್ಯಕ್ಷ ಬಿ ಎಮ್ ಜಿನರಾಳಿ, ಅಪರ ಸರಕಾರಿ ವಕೀಲ ಅನಿಲ ಕರೋಶಿ, ಕಾರ್ಯದರ್ಶಿ ಎಸ್ ಜೆ ನದಾಫ್, ವಿಠ್ಠಲ ಘಸ್ತಿ, ಎ ಎ ಬಾಗೆವಾಡಿ ,ನಾಗರತ್ನಾ ಗುರುಪ್ರಸಾದ, ಅನಿತಾ ಕುಲಕರ್ಣಿ ಉಪಸ್ಥಿತರಿದ್ದರು.

ಸತ್ಕಾರ ಸ್ವೀಕರಿಸಿ ಮಾತನಾಡಿದ ನ್ಯಾಯಾಧೀಶ ಗುರುಪ್ರಸಾದ ನಾನು ಇಲ್ಲಿಗೆ ಬಂದಿರುವದು ಪ್ರಕರಣಗಳನ್ನು ಕಡಿಮೆ ಮಾಡಲು , ಕಾರಣ ತಮ್ಮ ಮತ್ತು ಬೆಂಚ ಹಾಗೂ ಬಾರ್ ನಡುವಿನ ಸಹಕಾರದೊಂದಿಗೆ ಬರುವ ದಿನಗಳಲ್ಲಿ ತ್ವರಿತವಾಗಿ ನ್ಯಾಯ ದೊರಕಿಸುವ ಪ್ರಯತ್ನ ಮಾಡೊಣ ಎಂದರು.

ಕೋನೆಯಲ್ಲಿ ವಕೀಲ ಸಂಘದ ಅದ್ಯಕ್ಷ ಕುರಬೇಟ ಮಾತನಾಡಿ ಇ ಹಿಂದಿನಂತೆ ನೂತನ ನ್ಯಾಯಾಧೀಶರಿಗೆ ನಮ್ಮ ಸಂಘದ ಸಂಪೂರ್ಣ ಬೆಂಬಲ ನೀಡಲಾಗುವದು ಹಾಗೂ ಲೋಕ ಅದಾಲತ್ ಗಳಲ್ಲಿ ಹೇಚ್ಚಿನ ಪ್ರಕರಣಗಳು ಇತ್ಯರ್ಥಕ್ಕೆ ಪ್ರಯತ್ನಿಸಲಾಗುವದು ಎಂದರು .

ಈ ಸಂದರ್ಭದಲ್ಲಿ ಹುಕ್ಕೇರಿ, ಸಂಕೇಶ್ವರ ಹಿರಿಯ, ಕಿರಿಯ ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular

error: Content is protected !!