ಬೆಳಗಾವಿ: ಶಾಸಕ ರಾಜು ಕಾಗೆ ಸಹೋದರನ ಪುತ್ರನಿಂದ ಕಾರು ಅಪಘಾತ ಬೈಕ್ ಗೆ ಗುದ್ದಿದ ಕಾರು ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ನಡೆದಿದೆ .
ಗೋಕಾಕ್ ನ ಬಸವರಾಜ ಪುಡಕಲಕಟ್ಟಿ (22) ಮೃತ ದುರ್ದೈವಿ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಾವಿ ಯಿಂದ ಕಿತ್ತೂರಿಗೆ ಬೈಕ್ ಮೇಲೆ ಕೆಲಸಕ್ಕೆ ಹೊರಟ್ಟಿದ್ದ ಬಸವರಾಜ ಮತ್ತು ಇಬ್ಬರು ಸ್ನೇಹಿತರು ಅಪಘಾತದಲ್ಲಿ ಸಣ್ಣ ವಿಠ್ಠಲ್ ದುರದುಂಡಿ, ನಿಂಗಪ್ಪ ಹೆಬ್ಬಾಳಗೆ ಗಂಭೀರ ಗಾಯ ಗೊಂಡಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಪಡೆಯುತ್ತಿದ್ದು, ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತ ಬಸವರಾಜ ಮೃತದೇಹ ಕರೆದುಕೊಂಡು ಹೋಗಿದಾರೆ.
ಶಾಸಕ ರಾಜು ಕಾಗೆ ಸಹೋದರನ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .