Wednesday, June 18, 2025
Google search engine
Homeಸುದ್ದಿರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ
spot_img

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ

ಬೆಳಗಾವಿ: ದೇಶವನ್ನು ವಿಕಸಿತ ರಾಷ್ಟ್ರವನ್ನಾಗಿಸಲು ವಿದ್ಯಾರ್ಥಿಗಳ ಪಾತ್ರ ಹಿರಿಯದಾಗಿದೆ. ಯುವ ಶಕ್ತಿಯೇ ದೇಶದ ಅಭಿವೃದ್ಧಿಗೆ ಕಾರಣವಾಗಿದ್ದು, ಅಸಾಧ್ಯವನ್ನು ಸಾಧ್ಯವನ್ನಾಗಿಸಬಹುದಾಗಿದೆ. ಈ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಹೊಸದನ್ನು ಕಲಿತು, ಹೊಸದನ್ನು ನಿರ್ಮಿಸಬೇಕೆಂದು ರಾಜ್ಯಪಾಲರು ಮತ್ತು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್’ಚಂದ್ ಗೆಹ್ಲೋತ್ ಕರೆ ನೀಡಿದರು.

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಇಂದು ಬೆಳಗಾವಿ ವಿಟಿಯು ಎಪಿಜೆ ಅಬ್ದುಲ್ ಕಲಾಂ ಸಭಾ ಭವನದಲ್ಲಿ ನಡೆಯಿತು. ಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಮಾನ್ಯ ಥಾವರಚಂದ ಗೆಹಲೋತ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧರು. ಅತ್ಯಂತ ಗೌರವಯುತವಾಗಿ ಗಣ್ಯರು ವೇದಿಕೆಯ ವರೆಗೂ ಕರೆ ತರಲಾಯಿತು. ನಂತರ ಗಣ್ಯರಿಂದ ಸಮಾರಂಭವನ್ನು ಉದ್ಘಾಟಿಸಲಾಯಿತು.

ಕೃಷಿ, ಶಿಕ್ಷಣ ಮತ್ತು ಸಾಮಾಜೀಕ ಕ್ಷೇತ್ರದಲ್ಲಿ ಅತ್ಯುನ್ನತ ಸೇವೆಯನ್ನು ಸಲ್ಲಿಸಿದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠ, ನಿಡಸೋಶಿಯ ಪೀಠಾಧಿಪತಿಗಳಾದ ಶ್ರೀ ನಿರಂಜನ ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮೀಜಿಗಳಿಗೆ ಕೃಷಿ, ಶಿಕ್ಷಣ ಮತ್ತು ಸಮಾಜಸೇವೆಗೆ ಡಾಕ್ಟರ್ ಆಫ್ ಲೆಟರ್ಸ್’ನಿಂದ ಗೌರವಿಸಲಾಯಿತು.

ಕಾನೂನು ಕ್ಷೇತ್ರದಲ್ಲಿ ಹೆಸರುವಾಸಿಯಾದ ಸಂವಿಧಾನ ಜಾಗೃತಿಯಲ್ಲಿ ಕಾರ್ಯತತ್ಪರರಾದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ್ ಅವರಿಗೆ ಡಾಕ್ಟರ್ ಆಫ್ ಲಾ ಗೌರವ ಹಾಗೂ ವಿಜಯಪುರದ ಸೀಕ್ಯಾಬ್ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಶಮಸುದ್ದೀನ್ ಅಬ್ದುಲ್ಲಾ ಪುಣೇಕರ್, ಅವರಿಗೆ ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ಸೇವೆಗಾಗಿ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ರಾಜ್ಯಪಾಲರು ಮತ್ತು ಕುಲಾಧಿಪತಿಗಳಾದ ಥಾವರ್’ಚಂದ ಗೇಹ್ಲೊತ್ ಅವರು ಇಂದು ಪದವಿಯನ್ನು ಪಡೆದ ವಿದ್ಯಾರ್ಥಿಗಳು ತಮ್ಮ ಕೌಶಲ್ಯದಿಂದ ಪಡೆದ ಜ್ಞಾನವನ್ನು ಸವಾಲುಗಳನ್ನು ಎದುರಿಸಲು ಮತ್ತು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಲು ಉಪಯೋಗಿಸಬೇಕು. ಇಂದು ವಿದ್ಯಾರ್ಥಿಗಳು ಹಲವಾರು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಶಿಕ್ಷಣದಿಂದ ಕೇವಲ ಕಲಿಕೆಯಲ್ಲ, ವ್ಯಕ್ತಿತ್ವ, ನೈತಿಕ ಮೌಲ್ಯ ಮತ್ತು ಸಮಾಜ ಸೇವೆ ಸಾಧ್ಯ. ದೇಶವನ್ನು ವಿಕಸಿತ ರಾಷ್ಟ್ರವನ್ನಾಗಿಸಲು ವಿದ್ಯಾರ್ಥಿಗಳ ಪಾತ್ರ ಹಿರಿಯದಾಗಿದೆ. ಯುವ ಶಕ್ತಿಯೇ ದೇಶದ ಅಭಿವೃದ್ಧಿಗೆ ಕಾರಣವಾಗಿದ್ದು, ಅಸಾಧ್ಯವನ್ನು ಸಾಧ್ಯವನ್ನಾಗಿಸಬಹುದಾಗಿದೆ. ಈ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಹೊಸದನ್ನು ಕಲಿತು, ಹೊಸದನ್ನು ನಿರ್ಮಿಸಬೇಕೆಂದು ಕರೆ ನೀಡಿದರು.

ಇನ್ನು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಪ್ರಯತ್ನದಿಂದ ರಸ್ತೆ ನಿರ್ಮಾಣಕ್ಕಾಗಿ 9 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ವಿಶ್ವವಿದ್ಯಾಲಯಕ್ಕೆ ಮೂಲಭೂತ ಸೌಕರ್ಯವನ್ನು ಒದಗಿಸುವುದರೊಂದಿಗೆ ಶೈಕ್ಷಣಿಕ ಅಭಿವೃದ್ಧಿಗಳನ್ನು ತರಬೇಕಾಗಿದೆ. ಎ.ಐ ನಂತಹ ತಂತ್ರಜ್ಞಾನಗಳು ಮಾನವರ ಕೆಲಸವನ್ನು ಮಾಡುತ್ತಿವೆ. ಯಂತ್ರಗಳ ಮೇಲೆ ಹೆಚ್ಚು ಜನರು ಅವಲಂಬಿತರಾಗುತ್ತಿದ್ದಾರೆ. ಇಂದು ಪದವಿ ಪಡೆದ ವಿದ್ಯಾರ್ಥಿಗಳು ಹೊಸದನ್ನು ಕಲಿತು, ಭವಿಷ್ಯದಲ್ಲಿ ದೇಶಕ್ಕೆ ತಮ್ಮದೇಯಾದ ಕೊಡುಗೆಯನ್ನು ನೀಡಿ, ಪಾಲಕರ ಮತ್ತು ಪ್ರಾಧ್ಯಾಪಕರ ಕನಸನ್ನು ನನಸಾಗಿಸಬೇಕೆಂದರು.

ಘಟಿಕೋತ್ಸವದಲ್ಲಿ ಒಟ್ಟು 46013 ವಿದ್ಯಾರ್ಥಿಗಳು ಸ್ನಾತಕ ಪದವಿಯನ್ನು ಹಾಗೂ 2866 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ನೀಡಲಾಯಿತು. 11 ಜನರಿಗೆ ಸುವರ್ಣ ಪದಕ ಹಾಗೂ ನಗದು ಬಹುಮಾನ, ಅದರಂತೆ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ, 20 ಪಿಎಚ್.ಡಿ ಪದವಿಗಳನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಾಧ್ಯಾಪಕರಾದ ಜಿ.ಎನ್. ದೇವಿ, ಕುಲಪತಿಗಳಾದ ಸಿ.ಎಂ. ತ್ಯಾಗರಾಜ್, ಕುಲಸಚಿವರಾದ ಸಂತೋಷ ಕಾಮಗೌಡ, ರವೀಂದ್ರ ಕದಮ್, ಎಂ.ಎ. ಸಪ್ನಾ ಸೇರಿದಂತೆ ಇನ್ನುಳಿದ ಗಣ್ಯರು, ವಿದ್ಯಾರ್ಥಿಗಳು, ಪಾಲಕರು ಇನ್ನುಳಿದವರು ಉಪಸ್ಥಿತರಿದ್ಧರು.

RELATED ARTICLES
- Advertisment -spot_img

Most Popular

error: Content is protected !!