ಬೆಳಗಾವಿ: ಭಾರತದಲ್ಲಿರುವ ಅಕ್ರಮ ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ವತಿಂದ ಮಂಗಳವಾರ ಪ್ರತಿಭಟಿಸಿ ಜಿಲ್ಲಾ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾ ಅಧಿಕಾರಿ ಕಚೇರಿ ವರೆಗೆ ಪ್ರತಿಭಟನಾಕಾರರು ಪ್ರತಿಭಟಿಸಿ ಪಾಕಿಸ್ತಾನ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿಯರನ್ನು ಹೊರ ಹಾಕುವಂತೆ ಒತ್ತಾಯಿಸಿದರು.
ಕಾಂಗ್ರೆಸ್ ಭಯೋತ್ಪಾದಕರ ವಿರುದ್ಧ ಜಿರೋ ಟಾಲರೆನ್ಸ್ ಮಾಡ್ತಿದೆ. ಜಿರೋ ಟಾಲರೆನ್ಸ್, ಪಾಕಿಸ್ತಾನಿ ಪ್ರಜೆಗಳೇ ಭಾರತ ಬಿಟ್ಟು ತೊಲಗಿ ಎಂದು ಬಿತ್ತಿ ಪತ್ರ ಹಿಡಿದುಕೊಂಡು, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ನೆಲದ ಮೇಲೆ ಕುಳಿತ ಬಿಜೆಪಿ ಕಾರ್ಯಕರ್ತರು, ಜಾರಿ ಬಿದ್ದಾ ಜಾರಿ ಬಿದ್ದಾ ಸಿದ್ದರಾಮಯ್ಯ ಜಾರಿ ಬಿದ್ದಾ ಎಂದು ಘೋಷಣೆ ಕೂಗಿ ಮುಖಾಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.