Wednesday, June 18, 2025
Google search engine
Homeರಾಜ್ಯಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ ಪೂರ್ಣಗೊಂಡಿದೆ: ಮೊಹಮ್ಮದ್ ರೋಷನ್
spot_img

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ ಪೂರ್ಣಗೊಂಡಿದೆ: ಮೊಹಮ್ಮದ್ ರೋಷನ್

ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ತಿಂಗಳಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಟೆಂಡರ್ ಕರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಬೆಳಗಾವಿ-ಧಾರವಾರ ಹೊಸ ರೈಲು ಮಾರ್ಗ ಕೇಂದ್ರದ ಮಾಜಿ ಸಚಿವ ದಿ. ಸುರೇಶ ಅಂಗಡಿ ಅವರ ಕನಸಿನ ಯೋಜನೆ ಇದಾಗಿದ್ದು, ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ಬೆಳಗಾವಿ ಜಿಲ್ಲೆಯ 600 ಏಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದೆ.ಸದ್ಯ ಲೋಂಡಾ ಮಾರ್ಗವಾಗಿ ತೆರಳಬೇಕಿದೆ. ಈ ಯೋಜನೆಯಿಂದ ಬೆಳಗಾವಿಯಿಂದ ಕಿತ್ತೂರು ಮಾರ್ಗವಾಗಿ ಧಾರವಾಡಕ್ಕೆ 75 ಕಿ.ಮೀ. ಮಾರ್ಗ ಇಳಿಕೆ ಆಗಲಿದೆ. ಮೂರು ಗಂಟೆಯ ಬದಲಾಗಿ ಕೇವಲ ಒಂದೂವರೆ ಗಂಟೆಯಲ್ಲಿ ಧಾರವಾಡ ತಲುಪಬಹುದು.  ಈ ರೈಲು ಯೋಜನೆ ಕಾಮಗಾರಿ ಪೂರ್ಣಗೊಂಡ ಬಳಿಕ ಬೆಳಗಾವಿ-ಧಾರವಾಡ ಹಾಗೂ ಹುಬ್ಬಳ್ಳಿ ತ್ರಿವಳಿ ನಗರವಾಗಿ ಅಭಿವೃದ್ಧಿಗೆ ಪೂರಕವಾಗಲಿದೆ.

2020ರಲ್ಲಿ ಸುರೇಶ ಅಂಗಡಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ವೇಳೆ ಈ ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿತ್ತು. ಇದಕ್ಕಾಗಿ 900 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ‌ ಮೀಸಲಿಟ್ಟಿತ್ತು. ಬಳಿಕ ಭೂಸ್ವಾಧೀನ ಪ್ರಕ್ರಿಯೆ ವಿಳಂಬ ಹಿನ್ನೆಲೆಯಲ್ಲಿ ಯೋಜನೆ ನೆನೆಗುದಿಗೆ ಬಿದ್ದಿತ್ತು. ಕಳೆದ ಒಂದು ವರ್ಷದಿಂದ ಸಂಸದ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ನಿರಂತರ ಸಭೆ ನಡೆದಿದ್ದು, ಈಗ ಬೆಳಗಾವಿ ಜಿಲ್ಲೆಯಲ್ಲಿ 600 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದೆ.  ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಮಾಹಿತಿ‌ ನೀಡಿದ್ದು,

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆ ಕಳೆದ 4 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಐದು ತಿಂಗಳಿಂದ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಿದ್ದೇವೆ. ಭೂಸ್ವಾಧೀನ ಎರಡು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 600 ಎಕರೆ, ಎರಡನೇ ಹಂತದಲ್ಲಿ ಮತ್ತೆ 600 ಎಕರೆ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತದೆ. ಒಟ್ಟು 1200 ಎಕರೆ ಭೂಸ್ವಾಧೀನ ಪೂರ್ಣಗೊಂಡಿದ್ದು, ಇದರಿಂದ ಬೆಳಗಾವಿ-ಬೆಂಗಳೂರಿಗೆ ಹೋಗಲು ಲೋಂಡಾ ಬದಲು ನೇರವಾಗಿ ಧಾರವಾಡ ಮೂಲಕ ಹೋಗಬಹುದಾಗಿದೆ. ಅದೇ ರೀತಿ ವಂದೇ ಭಾರತ್ ರೈಲು ಕೂಡ ತುಂಬಾ ವೇಗವಾಗಿ ತಲುಪಲಿದೆ. ಬರುವ ಒಂದು ತಿಂಗಳಲ್ಲಿ ರೈಲ್ವೆ ಇಲಾಖೆ ಟೆಂಡರ್ ಕರೆಯಲಿದೆ. ಅದಕ್ಕೆ ಬೇಕಾದ ದುಡ್ಡನ್ನು ನಾವು ವಿತರಣೆ ಮಾಡುತ್ತೇವೆ. ಅಂತಿಮ ಅಧಿಸೂಚನೆ ಹೊರ ಬಿದ್ದು, ಈಗಾಗಲೇ ಭೂಸ್ವಾಧೀನವಾದ 700 ಎಕರೆ ಸರ್ಕಾರದಿಂದ ಸ್ವೀಕೃತಿಯಾಗಿದೆ. ಇನ್ನುಳಿದ ಭೂಮಿಗಾಗಿ ನಾವು ಪ್ರಸ್ತಾವನೆ ಸಲ್ಲಿಸಿದ್ದೇವೆ. ಬರುವ ಒಂದು ತಿಂಗಳೊಳಗೆ ಅದು ಕೂಡ ಸಾಧ್ಯವಾಗಲಿದೆ ಎಂದು ವಿವರಿಸಿದರು.

2 ವರ್ಷದಲ್ಲಿ 75 ಕಿ ಮೀ ರೈಲು ಮಾರ್ಗ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಬೆಳಗಾವಿ, ದೇಸೂರ, ಎಂ.ಕೆ.ಹುಬ್ಬಳ್ಳಿ, ಕಿತ್ತೂರು, ತೇಗೂರು ಮೂಲಕ ಧಾರವಾಡಕ್ಕೆ ರೈಲು ಮಾರ್ಗ ಸಂಪರ್ಕ ಕಲ್ಪಿಸಲಿದೆ.

RELATED ARTICLES
- Advertisment -spot_img

Most Popular

error: Content is protected !!