ಧಾರವಾಡ (ಕರ್ನಾಟಕ ವಾರ್ತೆ)ಫೆ.೧೩: ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ೨೦೧೭-೧೯ ರ ಸಾಲಿನಲ್ಲಿ ೨ ವರ್ಷದ ಅವಧಿಯ ವೃತ್ತಿಗಳಿಗೆ ಪ್ರವೇಶ ಪಡೆದು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಸೆಮಿಸ್ಟರ್ ಪದ್ಧತಿಯ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ಶುಲ್ಕ ಪಾವತಿಸಲು ಫೆ.೧೫,೨೦೨೪ ರವರೆಗೆ ಕಾಲಾವಕಾಶವಿದ್ದು ಅನುತ್ತೀರ್ಣ ಅಭ್ಯರ್ಥಿಗಳು ಹತ್ತಿರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಧಾರವಾಡ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.