Wednesday, June 18, 2025
Google search engine
Homeರಾಜ್ಯಪಹಲ್ಗಾಮ್ ನಲ್ಲಿ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ: ಸಚಿವ ಸತೀಶ ಜಾರಕಿಹೊಳಿ
spot_img

ಪಹಲ್ಗಾಮ್ ನಲ್ಲಿ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಪಹಲ್ಗಾಮ್ ನಲ್ಲಿ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ. ಭಾರತ- ಪಾಕ್ ನಡುವೆ ಕದಮ ವಿರಾಮ ಹಿನ್ನೆಲೆ ಈಗ ಯುದ್ಧ ಸ್ಥಗಿತಗೊಂಡಿದೆ. ಮುಂದೆ ಏನು ಮಾಡಬೇಕು ಎಂಬ ಚಿಂತನೆ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಹಲ್ಗಾಮ್ ನಲ್ಲಿ ಮೃತಪಟ್ಟ 26 ಜನರಿಗೆ ನ್ಯಾಯ ಸಿಕ್ಕಿಲ್ಲ. ನ್ಯಾಯ ಅಂತೂ ಕಂಡಿತವಾಗಿ ಸಿಕ್ಕಿಲ್ಲ. ಅದಕ್ಕಾಗಿ ಮತ್ತೆ ಕಾಯಬೇಕಾಗುತ್ತದೆ ಎಂದರು.

ಪೂರ್ಣ ಪ್ರಮಾಣದ ಯುದ್ಧ ಆಗುತ್ತದೆ ಎಂದು ಎಲ್ಲರೂ ನಿರೀಕ್ಷೆ ಮಾಡಿದ್ದರು. ಆದರೆ ಅದು ಆಗಿಲ್ಲ. ಇಷ್ಟಕ್ಕೆ ಸ್ಥಗಿತಗೊಂಡಿದೆ. ಮುಂದೆ ದೇಶವನ್ನು ಯಾವ ರೀತಿ ಕಟ್ಟಬೇಕು ಎನ್ನುವುದು ಮುಂದಿರುವ ಸವಾಲಾಗಿದೆ ಎಂದು ಹೇಳಿದರು.

1971ರಲ್ಲಿ ಇಂದಿರಾ ಗಾಂಧಿ ಮಾದರಿಯಲ್ಲಿ ಪಾಕ್ ಕಟ್ಟಿ ಹಾಕುವ ವಿಚಾರಕ್ಕೆ ಬಿಜೆಪಿಯವರೇ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಬಿಜೆಪಿಯವರು ಸೇರಿ ಎಲ್ಲರೂ ಯುದ್ಧ ನಿಲ್ಲಿಸಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಈಗ ಯುದ್ಧ ನಿಂತಿದೆ. ಹಾಗಾಗಿ, ಏನೂ ಮಾಡಲು ಆಗುವುದಿಲ್ಲ ಎಂದು ಸತೀಶ ಜಾರಕಿಹೊಳಿ ಹೇಳಿದರು.

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿರುವ ವಿಚಾರಕ್ಕೆ ಅದು ಅಂತಾರಾಷ್ಟ್ರೀಯ ವಿಚಾರ. ಟ್ರಂಪ್ ಯಾಕೆ ಮಧ್ಯಸ್ತಿಕೆ ವಹಿಸಿದರು ಮತ್ತು ಅವರಿಗೆ ಯಾರು ಮನವಿ ಮಾಡಿಕೊಂಡರು ಎಂಬ ವಿಚಾರ ಒಂದು ದಿನ ಹೊರಗೆ ಬರುತ್ತದೆ. ಅಲ್ಲಿಯವರೆಗೆ ನಾವೆಲ್ಲಾ ಕಾಯಬೇಕು ಎಂದರು.

ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿ ಕುರಾನ್ ಸುಟ್ಟ ವಿಚಾರಕ್ಕೆ ಸುಮೊಟೋ ಕೇಸ್ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಸೀದಿಯವರು ಸಿಸಿಟಿವಿ ಸೇರಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಇಂಥ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ವಹಿಸುತ್ತೇವೆ ಎಂದು ಸತೀಶ ಜಾರಕಿಹೊಳಿ ತಿಳಿಸಿದರು.

ಇನ್ನು ನಗರದಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಪೊಲೀಸರು ತಮ್ಮ ಪ್ರಯತ್ನ ಮಾಡುತ್ತಿದ್ದಾರೆ. ನಿರ್ದಿಷ್ಟವಾಗಿ ಯಾವುದಾದ್ರೂ ಪ್ರಕರಣ ಇದ್ದರೆ, ಅವರ ಗಮನಕ್ಕೆ ತರೋಣ ಎಂದರು.

RELATED ARTICLES
- Advertisment -spot_img

Most Popular

error: Content is protected !!