ಬೆಳಗಾವಿ : ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿಯ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ.
ಶನಿವಾರ ಬೆಳಿಗ್ಗೆ ಬೆಳಗಾವಿ ಲೋಕಾಯುಕ್ತ ಎಸ್ಪಿ ಹನಮಂತರಾಯ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ದೇವರಾಜ್ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ.ರಾಯಭಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರು ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ .
ಧಾರವಾಡದ PWD ಮುಖ್ಯ ಇಂಜಿನಿಯರ್ ಎಚ್ಸಿ ಸುರೇಶ ಮನೆ ಮೇಲೂ ದಾಳಿ ಹಾಗೂ ಬೆಳಗಾವಿಯ ಹನುಮಾನ ನಗರದಲ್ಲಿರುವ ಎಚ್ಸಿ ಸುರೇಶ ಮನೆ ಮೇಲೆ ದಾಳಿಮಾಡಿದು,
ಗದಗದ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಗಂಗಾಧರ ಶಿರೋಳ ಮನೆ ಮೇಲೂ ದಾಳಿ ಮಾಡಿ ಬೆಳಗಾವಿ ವಿಭಾಗದ ಲೋಕಾಯುಕ್ತ ವ್ಯಾಪ್ತಿಯ ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.