ಬೆಳಗಾವಿ: ಕ್ರೈಸ್ ವಸತಿ ಶಾಲೆಗಳ ಶಿಕ್ಷಕರ, ನೌಕರರ ಸಮಸ್ಯೆಗಳನ್ನು ಪರಿಷ್ಕರಿಸಬೇಕು ಸೇರಿಂದತೆ ವಿವಿಧ ಬೇಡಿಕಗಳನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ವಸತಿ ಶಾಲೆಗಳ ನೌಕರರ ಸಂಘದ ವತಿಂದ ಶನಿವಾರ ಜಿಲ್ಲಾ ಆಡಳಿತ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಆರ್ ಟಿ ಓ ವೃತ್ತದಿಂದ ಜಿಲ್ಲಾ ಕಚೇರಿ ವರೆಗೆ ಪ್ರತಿಭಟನಾಕಾರರು ಪ್ರತಿಭಟಿಸಿ ಖಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪದಾನ (DCRG) ಸೌಲಭ್ಯ ಒದಗಿಸಬೇಕು, ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿದರು.
ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್.ಸಿ, ಎಸ್.ಟಿ. ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು.ಖಾಯಂ ನೌಕರರಿಗೆ 10% ವಿಶೇಷ ಭತ್ಯೆ ಮಂಜೂರು ಮಾಡುಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ವಸತಿ ಶಾಲೆಗಳ ನೌಕರರ ಸಂಘದ ಗೌರವಾಧ್ಯಕ್ಷ ದಶರಥ ಆರೇರ, ವಸತಿ ಶಾಲೆಗಳ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸಂತೋಷ ಉಪ್ಪಾರ, ಜಿಲ್ಲಾ ಉಪಾಧ್ಯಕ್ಷ ಬಸಪ್ಪ ಜಾಲಿಕಟ್ಟಿ, ಉಪಾಧ್ಯಕ್ಷ ದಯಾನಂದ ಮತ್ತಿನಲ್ಲಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಕೌಜಲಗಿ ಸೇರಿದಂತೆ ಇತರರು ಇದ್ದರು