ಬೆಳಗಾವಿ : ಆರ್ಸಿಬಿ ಸಂಭ್ರಮಾಚರಣೆ ವೇಳೆ ಮೃತಪಟ್ಟ ಕುಟುಂಬಗಳಿಗೆ ಆರ್ ಸಿ ಬಿ ಹಾಗೂ ಕೆ ಎಸ್ ವತಿಂದ ಒಂದು ಕೋಟಿ ರೂ ಪರಿಹಾರ ಕೊಡಬೇಕು ಎಂದು ನಮ್ಮದು ಒತ್ತಾಯ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಇಂದು ಮಾದ್ಯಮ ಜೋತೆ ಮಾತನಾಡಿದ ಅವರು ಆರ್ಸಿಬಿ ಸಂಭ್ರಮಾಚರಣೆ ವೇಳೆ ಅಭಿಮಾನಿಗಳ ಸಾವು ನೋವು ತಂದಿದೆ. ಆರ್ ಸಿಬಿ ಹಾಗೂ ಕೆ ಎಸ್ ಹೆಚ್ಚಿನ ಪರಿಹಾರ ಕೊಡಬೇಕು ಎಂದರು.
ಜನರ ದಾರಿ ತಪ್ಪಿಸಲು ವಿರೋಧ ಪಕ್ಷಗಳು ಎನ್ ಮಾಡಬೇಕು ಮಾಡ್ತಾರೆ. ನಮ್ಮ ಹಿರಿಯರು ಇದಕ್ಕೆ ತಕ್ಕ ಉತ್ತರ ಕೊಡ್ತಾರೆ. ಪ್ರಸ್ತುತ ರಾಜಕಾರಣಕ್ಕಿಂತ ಘಟನೆ ಯಾಕೆ ಆಯಿತು ಎಂಬುದು ಗೊತ್ತಾಗಬೇಕು ಎಂದು ಹೇಳಿದರು.