Wednesday, June 18, 2025
Google search engine
Homeಕ್ರೈಂಯುವಕನೊಬ್ಬ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ: ತನಿಖೆಗೆ ಮುಂದಾದ ಪೊಲೀಸರು
spot_img

ಯುವಕನೊಬ್ಬ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ: ತನಿಖೆಗೆ ಮುಂದಾದ ಪೊಲೀಸರು

ಚಿಕ್ಕೋಡಿ: ಯುವಕನೊಬ್ಬ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗುರುರಾಜ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡೆತ್​ನೋಟ್​ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು.

ಈ ಕುರಿತು ಬೆಳಗಾವಿ ಎಸ್ಪಿ ಭೀಮಶಂಕರ್ ಗುಳೇದ ಮಾಹಿತಿ ನೀಡಿ, “ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ನಮ್ಮ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದಾರೆ. ಈ ಯುವಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್​ನೋಟ್​ನಲ್ಲಿ ಮೂರು ಜನರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ” ಎಂದು ಹೇಳಿದರು.

“ಮೃತ ಯುವಕ ಸಾಲ ಮಾಡಿಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಯಾವ ಕಾರಣಕ್ಕೆ ಸಾಲ ಮಾಡಿಕೊಂಡಿದ್ದ ಎಂಬುದು ಮುಖ್ಯ. ಈತ ಜೂಜಾಟದಲ್ಲಿ ತೊಡಗಿದ್ದ ಎಂಬ ಮಾಹಿತಿ ಕೂಡ ದೊರೆತಿದೆ. ಹಾಗಾಗಿ ಯುವಕನ ಈ ಆತ್ಮಹತ್ಯೆ ಪ್ರಕರಣವನ್ನು ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

“ಯಾರೋ ಕೆಲಸ ಕೊಡಿಸುವುದಾಗಿ ಹೇಳಿದ್ದವರು, ಕೊಡಿಸಲಿಲ್ಲ ಎಂಬ ಕಾರಣಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಈ ಪ್ರಕರಣದಲ್ಲಿ ನಮಗೆ ಬೇರೆ ಬೇರೆ ರೀತಿಯ ಮಾಹಿತಿ ಕೇಳಿ ಬರುತ್ತಿವೆ. ಸಾಲ ಮಾಡಿಕೊಂಡಿದ್ದು ನಿಜ. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ, ಸಾಲ ಯಾವ ಕಾರಣಕ್ಕೆ ಮಾಡಿದ್ದ ಅನ್ನೋದು ಬಹಳ ಮುಖ್ಯ. ಈತ ಸಾಮಾಜಿಕ ಪೀಡುಗುಗಳಿಗೆ ಬಲಿಯಾಗಿದ್ದ. ಈ ವಿಚಾರದಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ” ಎಂದರು.

ಈ ರೀತಿ ಪ್ರಾಣ ಕಳೆದುಕೊಳ್ಳುವುದು ತಪ್ಪು – ಈ ರೀತಿ ಯಾರೂ ಮಾಡಬಾರದೆಂದು ಎಸ್​ಪಿ ಮನವಿ: “ಪ್ರಕರಣದಲ್ಲಿ ಯಾರದ್ದಾದರೂ ನೇರ ಪಾತ್ರ ಇರುವುದು ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಕೊಟ್ಟಿರುವ ಸಾಲ ಮರಳಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ಈ ರೀತಿ ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು. ಕೊಟ್ಟಿರುವ ಸಾಲ ಮರಳಿ ವಸೂಲಿ ಮಾಡಲು ಹಲವು ಕಾನೂನು ರೀತಿಯ ಮಾರ್ಗಗಳಿವೆ. ನ್ಯಾಯಾಲಯಕ್ಕೆ ಹೋಗಬಹುದಿತ್ತು. ಕೆಲಸ ಕೊಡುವುದಾಗಿ ಹೇಳಿ ಮೋಸ ಮಾಡಿದ್ದರೆ ಸಿವಿಲ್​ ಕೋರ್ಟ್​ಗೆ ಹೋಗಬಹುದಿತ್ತು. ಇದನ್ನು ಬಿಟ್ಟು ಯುವಕರು ಈ ರೀತಿ ಪ್ರಾಣ ಕಳೆದುಕೊಳ್ಳುವುದು ತಪ್ಪು ಮತ್ತು ದುರದೃಷ್ಟಕರ. ಈ ರೀತಿ ತೊಂದರೆ ಆದಲ್ಲಿ ಸಮಾಜದಲ್ಲಿ ಸಾಕಷ್ಟು ಸಂಸ್ಥೆಗಳಿದ್ದು, ಅವುಗಳಿಂದ ಸಲಹೆ ಪಡೆದುಕೊಳ್ಳಬಹುದು. ಈ ರೀತಿಯ ದುಡುಕಿನ ನಿರ್ಧಾರವನ್ನು ಯಾರೂ ತೆಗೆದುಕೊಳ್ಳಬಾದು” ಎಂದು ಮನವಿ ಮಾಡಿದರು.

ನನಗೆ ನ್ಯಾಯ ಕೊಡಿಸಿ ಎಂದು ತಂದೆಯ ಮನವಿ: ಯುವಕನ ತಾಯಿ ಅಮ್ಮಜವ್ವ ಜನಗೌಡ ಮಾತನಾಡಿ, “ನನ್ನ್ನ ಮಗ ವಿದ್ಯಾವಂತನಾಗಿದ್ದ, ನನ್ನ ಮಗನಿಗೆ ಸರ್ಕಾರಿ ನೌಕರಿ ಕೊಡಿಸ್ತೀನಿ ಎಂದು ಅವನ ಕೆಲವು ಸ್ನೇಹಿತರು ಅವನಿಂದ 60 ಲಕ್ಷ ತೆಗೆದುಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಹಣ ಮತ್ತು ನೌಕರಿ ಕೊಡದೇ ಇದ್ದಾಗ ನಾವು ಮನೆಯಲ್ಲಿ ಬೈತೀವಿ ಅಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನಗೆ ಸರ್ಕಾರ ನ್ಯಾಯ ಕೊಡಿಸಬೇಕು” ಎಂದು ಹೇಳಿದರು.

RELATED ARTICLES
- Advertisment -spot_img

Most Popular

error: Content is protected !!