ಬೆಳಗಾವಿ: ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜನಪ್ರಿಯ ನಾಯಕರು ಹಾಗೂ ಹಿರಿಯರಾಗಿದ್ದ ಕಾಕಾಸಾಹೇಬ ಪಾಟೀಲ್ ಅವರ ನಿಧನದ ಸುದ್ದಿ ತುಂಬಾ ನೋವುಂಟು ಮಾಡಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ತಿಳಿಸಿದ್ದಾರೆ.
1999, 2004, 2008ರಲ್ಲಿ ಮೂರು ಬಾರಿ ಅವರು ನಿಪ್ಪಾಣಿ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ಅವರು, ನಿಪ್ಪಾಣಿ ಮತಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದಾರೆ. ಪಕ್ಷ ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆ ಅಪಾರ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.