
ಬಳ್ಳಾರಿ,ಫೆ.14: ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಾಧ್ಯಮ ಲೋಕದಲ್ಲಿ ಯಶಸ್ಸು ಕಾಣಬೇಕಾದರೆ ಜ್ಞಾನ ಸಂಪಾದನೆಯ ಜತೆಗೆ ಪದ ಸಂಪದ, ಬರವಣಿಗೆ, ಭಾಷಾ ಕೌಶಲ್ಯ ತುಂಬಾ ಅಗತ್ಯವಾಗಿದೆ.
ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಹೊನ್ನೂರಮ್ಮ ದಿವಂಗತ ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಡೆದ ಪತ್ರಿಕೋದ್ಯಮ, ಇಂಗ್ಲಿಷ್ ವಿಭಾಗವನ್ನು ಮತ್ತು ‘ಯುವ ಸ್ಪೂರ್ತಿ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಲಾಯಿತು.
ನೂತನವಾಗಿ ೨೦೨೪-೨೫ ನೇ ಶೈಕ್ಷಣಿಕ ವರ್ಷದಿಂದ ಪತ್ರಿಕೋದ್ಯಮ ಮತ್ತು ಇಂಗ್ಲಿಷ್ ವಿಭಾಗದ ಕೋರ್ಸ್ ಆರಂಭಿಸಲಾಗಿದೆ. ಆಸಕ್ತಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು
ವೇದಿಕೆಯ ಮೇಲೆ ಇರುವ ಗಣ್ಯರಾದ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ, ಟಿವಿ ನಿರೂಪಕಿ ನವಿತಾ ಜೈನ್, ಈಶಾನ್ಯ ಟೈಮ್ಸ್ ಜಿಲ್ಲಾ ವರದಿಗಾರ ಮಂಜುನಾಥ, ರಾಜ್ಯಶಾಸ್ತ್ರ ವಿಭಾಗದ ಡಾ. ಜಗದೀಶ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ ತೇಜಸ್ವಿನಿ, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ವೈ. ಜನಾರ್ದನರೆಡ್ಡಿ, ಐಕ್ಯೂಎಸಿ ಸಂಚಾಲಕ ಡಾ. ಬಿ.ವಿರೇಶ್, ಪ್ರಾಧ್ಯಾಪಕರಾದ ಸಿದ್ದೇಶ, ಮಾರಪ್ಪ ಎ.ಕೆ ವರಲಕ್ಷ್ಮಿ, ಸುಭಾನ್ ಸಾಬ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.