ರಾಯಬಾಗ: ಸಂಸದೆಯಾಗಿ ಒಂದು ವರ್ಷದ ಅವಧಿಯಲ್ಲಿ ರಾಯಬಾಗ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು 25 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು.
ಚಿಕ್ಕೋಡಿ ಲೋಕಸಭೆ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ ಎಸಿಪಿ, ಟಿಎಸ್ ಪಿ ಯೋಜನೆಯಡಿ ಎಸ್ಸಿ ಕಾಲೋನಿಯಲ್ಲಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಬೆಳೆಯಬೇಕೆಂಬ ಉದ್ಧೇಶದಿಂದ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದ ಅವರು, ಈ ಭಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೆ ಕ್ರೀಡಾಪಟುಗಳು ರಾಷ್ಟ್ರೀಯ-ಅಂತರಾಷ್ಟ್ರೀ ಮಟ್ಟದಲ್ಲಿ ಮಿಂಚಲು ಅನುಕೂಲವಾಗಲಿದೆ. ಹಿರಿಯರ ಮಾರ್ಗದರ್ಶನ ಪಡೆದು, ಕ್ರೀಡೆಗೆ ಬೇಕಾಗುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮತದಾರರ ಆಶೀರ್ವಾದಿಂದ ಮೊದಲ ಸಲ ಚಿಕ್ಕೋಡಿ ಕ್ಷೇತ್ರದಿಂದ ಸಂಸದೆಯಾಗಿರುವೆ. ಈ ಭಾಗದ ಮನೆ ಮಗಳಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಹೀಗಾಗಿ ಕ್ರೀಡಾ, ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಪಡಿಸಲು ನಿರಂತರ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
ರಾಯಬಾಗ ವಿಧಾನಸಭಾ ಕ್ಷೇತ್ರದ ನಸಲಾಪುರ, ಬಾವನ-ಸವದತ್ತಿ, ನಸಲಾಪೂರ, ಕರೋಶಿ ಬಂಬಲವಾಡ ಗ್ರಾಮಗಳಲ್ಲಿ ಎಸ್.ಸಿ. ಕಾಲೋನಿಯಲ್ಲಿ ಸಿಸಿ ರಸ್ತೆ ಅಭಿವೃದ್ಧಿ ನಿರ್ಮಾಣಕ್ಕೆ ತಲಾ ಒಂದು ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಹಾಗೂ 3 ಕೋಟಿ ರೂ. ವೆಚ್ಚದಲ್ಲಿ ಬಂಬಲವಾಡದಿಂದ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿವರೆಗೆ ಕುಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೋಹಿತೆ, ಮುಖಂಡರಾದ ರಾಮಪ್ಪ ಪೂಜಾರಿ, ಸುರೇಶ ಶಾಮ್ ರೇವಡೆ, ಶಂಕರ್ ಗೌಡ ಪಾಟೀಲ್ , ವೃಷಭ ಪಾಟೀಲ್ , ವಿನಯ ಕುಂಬಾರ , ರುದ್ರಪ್ಪ ಸಂಗಪ್ಪಗೊಳ , ರಾಜು ಕೊಟ್ಟಿಗೆ , ಅರುಣ ನರಗುಂದೆ, ಶಿವು ಪಾಟೀಲ, ಕೃಷ್ಣ ಜುಗಳೆ, ಸಂಜಯ್ ಕಾಂಬ್ಳೆ, ಚೇತನ್ ಹೊನ್ನಗೊಳ ಹಾಗೂನ ಗ್ರಾಮಸ್ಥರು ಇತರರು ಇದ್ದರು.
\