Thursday, June 19, 2025
Google search engine
Homeಸುದ್ದಿರಾಷ್ಟ್ರೀಯ ಪಲ್ಸ ಪೋಲಿಯೋ ಕಾರ್ಯಕ್ರಮ; ಜಿಲ್ಲಾ ಕಾರ್ಯಪಡೆ ಸಭೆ ಲಸಿಕಾ ಅಭಿಯಾನ ಯಶಸ್ವಿಗೆ ಶ್ರಮಿಸಿ:...
spot_img

ರಾಷ್ಟ್ರೀಯ ಪಲ್ಸ ಪೋಲಿಯೋ ಕಾರ್ಯಕ್ರಮ; ಜಿಲ್ಲಾ ಕಾರ್ಯಪಡೆ ಸಭೆ ಲಸಿಕಾ ಅಭಿಯಾನ ಯಶಸ್ವಿಗೆ ಶ್ರಮಿಸಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ಮಾರ್ಚ್ 3 ರಂದು ನಡೆಯಲಿರುವ ಪಲ್ಸ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ ಪೋಲಿಯೋ ಹನಿ ಹಾಕಿಸುವಂತೆ ಪಾಲಕರಿಗೆ ತಿಳಿಸಬೇಕು. ಈ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡು ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಫೆ.23) ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.

ನಗರದ ಪ್ರದೇಶಗಳಲ್ಲಿ ಪ್ರತಿ ತಾಲೂಕಿನ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ತಾಲೂಕಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸಮಿತಿ ಸಭೆ ನಡೆಸಬೇಕು. ಕಬ್ಬು ಕಡಿಯುವ ಮತ್ತು ಗ್ಯಾಂಗಮನ್ ಗಳ ಮಾಹಿತಿಯನ್ನು ಕಾರ್ಖಾನೆಗಳಿಂದ ಪಡೆದು ಅವರ ಮಕ್ಕಳಿಗೆ ಲಸಿಕೆಯನ್ನು ಹಾಕುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕ್ರಿಯಾಯೋಜನೆ ರೂಪಿಸಬೇಕು. ಹಳ್ಳಿಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಎರಡು ದಿನ ಮುಂಚಿತವಾಗಿ ತಿಳಿಸಬೇಕು. ಪೋಲಿಯೋ ಹನಿ ಹಾಕಿಸಿಕೊಳ್ಳುವುದಕ್ಕೆ ಲಸಿಕಾ ಕೇಂದ್ರಗಳನ್ನು ತೆರೆಯಬೇಕು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕು. ಬೂತಗಳಲ್ಲಿ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರ ಜೊತೆಗೆ ಎಲ್ಲ ಅಂಗನವಾಡಿಗಳಲ್ಲಿ ಕರಪತ್ರಗಳು, ಬಿತ್ತಿ ಪತ್ರಗಳು, ಬ್ಯಾನರಗಳನ್ನು ಮುಂಚೆಯೇ ಪ್ರದರ್ಶಿಸಬೇಕು ಎಂದು ಹೇಳಿದರು.

ನಗರ ಪ್ರದೇಶಗಳಲ್ಲಿ ಲಸಿಕಾ ಸಿಬ್ಬಂದಿಗಳ ಕೊರತೆಯಿರುವುದರಿಂದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬೇಕು. ಶಾಲಾ ಮಕ್ಕಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ ಹಳ್ಳಿಗಳಲ್ಲಿ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.

ಯಾವುದೇ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಪಟ್ಟಣಗಳಲ್ಲಿ ಸ್ವಚ್ಚ ಭಾರತ ಮಿಷನ್ ವಾಹನಗಳ ಧ್ವನಿ ವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು, ಪಟ್ಟಣಗಳಲ್ಲಿ ಬಿತ್ತಿ ಪತ್ರಗಳನ್ನು ಮುದ್ರಿಸಿ ಹಂಚಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಯಾವುದೇ ಕೊರತೆಯಾದಂತೆ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಒಂದುವೇಳೆ ಸಮಸ್ಯೆಗಳು ಎದುರಾದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಮಾ 4 ರಿಂದ 6 ರವರೆಗೆ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಬೂತ್‍ನಲ್ಲಿ ಬಿಟ್ಟುಹೋದ ಮಕ್ಕಳಿಗೆ ಲಸಿಕೆ ಹಾಕಿಸಲು  ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಪೋಸ್ಟರ್ ಬಿಡುಗಡೆ:

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ ಸಿಇಒ ರಾಹುಲ್ ಶಿಂಧೆ, ಡಿಎಚ್ಒ ಮಹೇಶ ಕೋಣಿ ಅವರು ಪಲ್ಸ್ ಪೋಲಿಯೋ ಲಸಿಕೆ ಕುರಿತು ಜಾಗೃತಿ ಬಿತ್ತಿ ಪತ್ರ ಬಿಡುಗಡೆ ಮಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಶ ಕೋಣಿ, ಟಿಎಚ್ಒ ಚೇತನ ಕಂಕಣವಾಡಿ, ಡಬ್ಲ್ಯೂಎಚ್ಒ ಸಿದ್ದಲಿಂಗಯ್ಯ, ಡಿಸ್ಟ್ರಿಕ್ಟ್ ಸರ್ಜನ್ ವಿ.ವಿ ಶಿಂಧೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular

error: Content is protected !!