ಬೆಂಗಳೂರು: ಅಧಿವೇಶನ ಮತ್ತು ರಾಜ್ಯ ಸಭೆ ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ರಿಂದ ಆದೇಶ ನೀಡಲಾಗಿದೆ. ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮಂಗಳವಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.
ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ರಾಜ್ಯಸಭೆಯ ಲೆಕ್ಕಾಚಾರ ಜೋರಾಗಿಯೇ ಇದೆ. ಏನಾದರೂ ಮಾಡಿ ಕಾಂಗ್ರೆಸ್ ಬಿಗ್ ಶಾಕ್ ಕೊಡಬೇಕು ಅಂತ ತಂತ್ರ ಹೂಡಿರುವ ಬಿಜೆಪಿ-ಜೆಡಿಎಸ್ ಎರಡನೇ ಅಭ್ಯರ್ಥಿ ಮೂಲಕ ಕಾಂಗ್ರೆಸ್ಗೆ ಚೆಕ್ಮೆಟ್ ಕೊಡುವುದಕ್ಕೆ ಸನ್ನದ್ಧವಾಗಿದ್ದಾರೆ. ಕೊನೆ ಕ್ಷಣದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿಯನ್ನ ಅಖಾಡಕ್ಕೆ ಇಳಿಸಿದ್ದು, ಕಾಂಗ್ರೆಸ್ ಮಣಿಸುವುದಕ್ಕೆ ದೊಡ್ಡ ಲೆಕ್ಕಾಚಾರಗಳನ್ನೇ ಹಾಕಿದ್ದಾರೆ.