Thursday, June 19, 2025
Google search engine
Homeಸುದ್ದಿನಿಪ್ಪಾಣಿ ಪಟ್ಟಣದ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ : ಕಿಡಿಗೇಡಿಗಳು ಬೆದರಿಕೆ ಪತ್ರ
spot_img

ನಿಪ್ಪಾಣಿ ಪಟ್ಟಣದ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ : ಕಿಡಿಗೇಡಿಗಳು ಬೆದರಿಕೆ ಪತ್ರ

ಬೆಳಗಾವಿ : ನಿಪ್ಪಾಣಿ ಪಟ್ಟಣದ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಕಿಡಿಗೇಡಿಗಳು ಬೆದರಿಕೆ ಪತ್ರ ಬರೆದಿದ್ದಾರೆ.

ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ದುಷ್ಕರ್ಮಿಗಳ ಪತ್ರ ಸದ್ಯ ಸಂಚಲನ ಸೃಷ್ಟಿಸಿದೆ.

ಶ್ರೀರಾಮ ಮಂದಿರ 101 ವರ್ಷಗಳ ಇತಿಹಾಸ ಹೊಂದಿದೆ. ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯಲ್ಲಿ ಪತ್ತೆಯಾಗಿದೆ. ಎರಡನೇ ಪತ್ರ ಮಂದಿರದ ಆವರಣದ ಹನುಮಾನ ಮಂದಿರದಲ್ಲಿ ಪತ್ತೆಯಾಗಿವೆ. ಬೆದರಿಕೆ ಪತ್ರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹೈ ಅಲರ್ಟ್ ಆಗಿದ್ದು, ಮಂದಿರದ ಆವರಣದಲ್ಲಿ 14 ಸಿಸಿಟಿವಿಗಳನ್ನು ಅಳವಡಿಸಿಲಾಗಿದೆ. ಒಂದು ಡಿಆರ್ ಪೋಲಿಸ್ ತುಕಡಿಯನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ.

RELATED ARTICLES
- Advertisment -spot_img

Most Popular

error: Content is protected !!